Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಶ್ರೀರಂಗಪಟ್ಟಣದ ಸೇತುವೆಯ ಬಳಿ ಮತ್ಸ್ಯಕನ್ಯೆ ಬಂದಿದ್ದು ನಿಜವೇ?

- Advertisement -
- Advertisement -

ಇತಿಹಾಸ ಪ್ರಸಿದ್ದ ಶ್ರೀರಂಗಪಟ್ಟಣದ ಹಳೇ ಸೇತುವೆಯ ಬಳಿ ಮತ್ಸ್ಯಕನ್ಯೆಯರು ಕಂಡು ಬಂದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ಸೇತುವೆಯೊಂದರ ಕೆಳಗೆ ಕಲ್ಲುಗಳ ಮೇಲೆ ಕುಳಿತಿರುವ ಮನುಷ್ಯನ ಶರೀರವಿರುವವ ಮೀನಿನ ಬಾಲದಂತಿರುವ ಜೀವಿಯೊಂದು ಕಲ್ಲುಗಳ ಮೇಲೆ ನೆಗೆಯುತ್ತಾ ಮರೆಯಾಗುವ ದೃಶ್ಯವು ವೈರಲ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಿಜವಾಗಿಯೂ ಈ ದೃಶ್ಯಗಳು ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಸೇತುವೆಯ ಬಳಿ ಸೆರೆಯಾಗಿವೆಯೆ? ಈ ರೀತಿಯ ಮತ್ಸ್ಯಕನ್ಯೆ ಇರುವುದು ನಿಜವೇ ಎಂಬುವುದನ್ನು ಫ್ಯಾಕ್ಟ್‌ಚೆಕ್ ಮಾಡೋಣ.

ಮತ್ಸ್ಯಕನ್ಯೆಯರ ವಿಡಿಯೊ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ಈ ವಿಡಿಯೊ ಕುರಿತ ವಾಸ್ತವ ಏನೆಂದು ತಿಳಿಸುವಂತೆ ನಾನುಗೌರಿ.ಕಾಂ ವಾಟ್ಸಾಪ್‌‌ಗೆ ಹಲವಾರು ಮನವಿಗಳು ಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಇದೇ ರೀತಿಯ ದೃಶ್ಯಗಳೊಂದಿಗೆ ವೀಡಿಯೊವನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ.

ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ನಾವು ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ಇಲ್ಲಿನ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ. CGI ವಿಡಿಯೋ (ಕಂಪ್ಯೂಟರ್ ರಚಿತ ಚಿತ್ರ) 3D ನಲ್ಲಿ ಮತ್ಸ್ಯಕನ್ಯೆಯ ವಿನ್ಯಾಸ ಮತ್ತು ರಚನೆ: ಜೋಕ್ವಿನ್ ಪೆರೆಜ್ 3D ಅನಿಮೇಷನ್ ಮತ್ತು VFX ಆವೃತ್ತಿ” ಎಂದು ಹೇಳಿದೆ.

ಆದ್ದರಿಂದ, ಶ್ರೀರಂಗಪಟ್ಟಣದಲ್ಲಿ ಮತ್ಸ್ಯಕನ್ಯೆ ಎಂಬ ವೈರಲ್ ವಿಡಿಯೊ ನಿಜವಲ್ಲ. ಇದು 3D ಡಿಜಿಟಲ್‌ನಿಂದ ರಚಿಸಲಾದ ವಿಡಿಯೊ ಎಂಬುವುದು ಖಚಿತವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೊ ದೃಶ್ಯಗಳು 3D ಡಿಜಿಟಲ್ ಮೂಲಕ ರಚಿಸಲ್ಪಟ್ಟ ಕಾಲ್ಪನಿಕ ದೃಶ್ಯಗಳಾಗಿವೆ. ಹಾಗಾಗಿ ಶ್ರೀರಂಗಪಟ್ಟಣದಲ್ಲಿ ಜೀವಂತ ಮತ್ಸ್ಯಕನ್ಯೆಯರ ವಿಡಿಯೋ ದೃಶ್ಯಗಳು ಎಂದು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಈ ಹಿಂದೆಯೂ ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಅಂಬೇಡ್ಕರ್‌‌ ಸ್ವಾಮಿಜಿಯ ಆಶಿರ್ವಾದ ಪಡೆದಿಲ್ಲ; ಚಿತ್ರದಲ್ಲಿ ಇರುವುದು ಬಾಬಾ ಸಾಹೇಬ್ ಅಲ್ಲ

ಮತ್ತೊಂದು ವಿಡಿಯೊ ಕೂಡಾ ಮತ್ಸ್ಯಕನ್ಯೆ ಎಂದು ವೈರಲ್!

ಮೇಲಿನ ವಿಡಿಯೊ ಮಾತ್ರವಲ್ಲದೆ ಮತ್ತೊಂದು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡಲಾಗಿದೆ. ಈ ವಿಡಿಯೊದಲ್ಲಿ ವಿಚಿತ್ರ ಪ್ರಾಣಿಯ ದೃಶ್ಯವೊಂದು ಕಂಡುಬರುತ್ತದೆ. ಈ ವಿಡಿಯೊವನ್ನು ಕೂಡಾ ಪರಿಶೀಲಿಸಿದಾಗ ಇದು 3D ದೃಶ್ಯಗಳ ಮೂಲಕ ರಚಿತವಾದ ವಿಡಿಯೊ ಎಂದು ತಿಳಿದು ಬಂದಿದೆ.

ಫ್ಯಾಕ್ಟ್‌ಚೆಕ್

ಈ ವೀಡಿಯೊ ಮೂರು ವಿಭಿನ್ನ ಕ್ಲಿಪ್‌ಗಳನ್ನು ಹೊಂದಿದೆ. ಎಲ್ಲಾ ಮೂರು ಕ್ಲಿಪ್‌ಗಳನ್ನು ‘ಜೆಜೆಪಿಡಿ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ನೋಡಬಹುದು. ವೀಡಿಯೊ ವಿವರಣೆಯಲ್ಲಿ, “ಇವು ಮನರಂಜನೆಗಾಗಿ ರಚಿಸಿದ ಸಾಮಾನ್ಯ ವೀಡಿಯೊಗಳಾಗಿವೆ. ತೋರಿಸಿರುವ ಎಲ್ಲಾ ಚಿತ್ರಗಳು ಕಾಲ್ಪನಿಕವಾಗಿವೆ” ಎಂದು ಹೇಳಿದೆ.

ಇದೇ ಚಾನೆಲ್‌ನಲ್ಲಿನ ಮತ್ತೊಂದು ವೀಡಿಯೊ ಈ ವಿಡಿಯೊಗಳ ಮೇಕಿಂಗ್ ಪ್ರಕ್ರಿಯೆಯನ್ನು ತೋರಿಸುತ್ತದೆ.

ಪೋಸ್ಟ್ ಮಾಡಿದ ವೀಡಿಯೊದಲ್ಲಿರುವ ಜೀವಿ ನಿಜವಾದದ್ದಲ್ಲ. ‘ಜೆಜೆಪಿಡಿ ಪ್ರೊಡಕ್ಷನ್ಸ್’ನ ಯೂಟ್ಯೂಬ್ ಚಾನೆಲ್‌ನಲ್ಲಿ, ವೀಡಿಯೊವನ್ನು ಕಂಪ್ಯೂಟರ್-ರಚಿತ (ಸಿಜಿಐ) ವೀಡಿಯೊ ಎಂಬ ವಿವರಣೆಯೊಂದಿಗೆ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

ಒಟ್ಟಾರೆಯಾಗಿ ಹೇಳುವುದಾದರೆ 3D ತಂತ್ರಜ್ಞಾನದಿಂದ ರಚಿಸಿದ ವಿಡಿಯೊವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ಸ್ಯಕನ್ಯೆಯರ ನೈಜ ದೃಶ್ಯಗಳು ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಅಲ್ಲದೆ ವಾಸ್ತವವಾಗಿ ಮತ್ಸ್ಯಕನ್ಯೆ ಎಂಬುವುದು ಕಾಲ್ಪನಿಕ ಜೀವಿಯಾಗಿದ್ದು, ಅಂತಹ ಒಂದು ಜೀವಿ ಇದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ.

ಹಾಗಾಗಿ ಮನರಂಜನೆಗಾಗಿ ಮಾಡಲಾದ ವಿಡಿಯೊವನ್ನು ಕೆಲವರು ನಿಜವೆಂದು ನಂಬಿ ವಿಡಿಯೊ ವೈರಲ್ ಮಡಿದ್ದಾರೆ. ಆದರೆ ಇದು ಯಾವುದೂ ನಿಜವಾದ ದೃಶ್ಯಗಳಲ್ಲ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...