Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಬಾಲಿವುಡ್ ಚಿತ್ರೋದ್ಯಮವನ್ನು ಗುರಿಯಾಗಿಸಿಕೊಂಡಿರುವ ಬಲಪಂಥೀಯ ಗುಂಪುಗಳು, ನಟ ಅಮಿತಾಬ್‌ ಬಚ್ಚನ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಫೋಟೋವೊಂದನ್ನು ವೈರಲ್ ಮಾಡಿದ್ದಾರೆ.

ಡ್ರಗ್ಸ್ ವಿಚಾರದಲ್ಲಿ ಬಾಲಿವುಡ್ ಚಿತ್ರೋದ್ಯಮವನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ದ, ಸಂಸತ್ತಿನಲ್ಲಿ ಜಯ ಬಚ್ಚನ್ ಭಾಷಣ ಮಾಡಿದ ನಂತರ ಇದು ವೈರಲಾಗಿದ್ದು, ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಪ್ರೀಹಾ ರಾಯ್ ಚೌದರಿ ಎನ್ನುವವರು, “ಅಮಿತಾಬ್ ಅವರೊಂದಿಗೆ ಇರುವುದು ಯಾರು? ಯಾರು ಇದು ದಾವೂದ್ ಇಬ್ರಾಹಿಂ ಅಲ್ಲ ಎಂದು ಬೊಬ್ಬೆ ಹೊಡೆಯುತ್ತೀರೋ ಅವರು ತಮ್ಮ ಸ್ವಂತ ಮೊಬೈಲ್‌ ಮೂಲಕ ಗೂಗಲ್‌ನಲ್ಲಿ ಹುಡುಕಿ” ಎಂದು ಬರೆದಿದ್ದರು.

ಇದನ್ನೂ ಓದಿ: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದರ ಆರ್ಕೈವ್ ಇಲ್ಲಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಇದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್

ವೈರಲಾಗುತ್ತಿರುವ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಇದು 2010 ರಲ್ಲಿ ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ಚಿತ್ರ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಪತ್ರಿಕೆಯು, “ರಾಜೀವ್ ಗಾಂಧಿ ಸೀ ಲಿಂಕ್‌ನ ಆಯೋಗದ ಸಮಾರಂಭದಲ್ಲಿ ಅಮಿತಾನ್ ಬಚ್ಚನ್ ಅವರೊಂದಿಗೆ ಅಶೋಕ್ ಚವಾಣ್” ಎಂದು ಅಡಿ ಬರಹ ನೀಡಿದೆ. ಇದನ್ನು ಪಿಟಿಐ ಕ್ಲಿಕ್ಕಿಸಿದೆ. ಅಶೋಕ್‌ ಚವಾಣ್‌ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.

ಪತ್ರಿಕೆಯ ಸ್ಕ್ರೀನ್‌ಶಾರ್ಟ್

ಅಷ್ಟೇ ಅಲ್ಲದೆ ಪಿಟಿಐ ಆರ್ಕೈವ್‌ಗಳಲ್ಲಿ ಕೂಡಾ ಇದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ, ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ಕೂಡ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಸ್ಫಷ್ಟೀಕರಣ ನೀಡಿ, ಈ ಚಿತ್ರದಲ್ಲಿ ತನ್ನ ತಂದೆಯ ಜೊತೆ ಇರುವುದು ಅಶೋಕ್ ಚವಾಣ್, ದಾವೂದ್ ಇಬ್ರಾಹಿಂ ಅಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಜಯ ಬಚ್ಚನ್ ಅವರ ಭಾಷಣದ ಹಿನ್ನೆಲೆಯಲ್ಲಿ ಹಳೆಯ, ಸಂಬಂಧವಿಲ್ಲದ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರದಲ್ಲಿ ಇರುವುದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಆಗಿದ್ದಾರೆಯೆ ವಿನಃ ದಾವೂದ್ ಇಬ್ರಾಹಿಂ ಅಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...