Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

- Advertisement -
- Advertisement -

ಸುಪ್ರೀಂಕೋರ್ಟ್‌‌‌‌‌ ಮಾಜಿ ನ್ಯಾಯಮೂರ್ತಿ “ದಲ್ವೀರ್‌‌‌ ಭಂಡಾರಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದ(ICJ) ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದು ಹರಿದಾಡುತ್ತಿದೆ. ಅವರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವವೇ ಕಾರಣವಾಗಿದ್ದು, ಭಾರತವನ್ನು ಇದೀಗ ವಿಶ್ವ ಗುರುತಿಸುತ್ತಿದೆ ಎಂಬ ರೀತಿಯಲ್ಲಿ ಈ ಸಂದೇಶ ಹರಿದಾಡುತ್ತಿದೆ.

ಫೇಸ್‌ಬುಕ್‌, ವಾಟ್ಸಪ್‌ ಮತ್ತು ಟ್ವಿಟರ್‌ನಲ್ಲಿ ಈ ಸಂದೇಶ ಹರಿದಾಡುತ್ತಿದೆ. ಬಿಜೆಪಿ ಬಿಹಾರದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ನಾಗೇಂದ್ರ ನಾಥ್ ತ್ರಿಪಾಠಿ, “ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಅಂತರರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ಕಠಿಣ ಪರಿಶ್ರಮವು ವಿಶ್ವದಾದ್ಯಂತದ ದೇಶಗಳೊಂದಿಗೆ ಉತ್ತಮ ಸಂಬಂಧ ಬೆಳೆದಿದೆ” ಎಂದು ಅವರು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ತ್ರಿಪಾಠಿ ಅವರು ತಮ್ಮ ಫೇಸ್‌ಬುಕ್ ಫೇಜ್‌ನಿಂದಲೂ ಹೇಳಿಕೆಯನ್ನು ನೀಡಿದ್ದರು. ಇದನ್ನು ಬಿಹಾರ ಬಿಜೆಪಿ ಹಂಚಿಕೊಂಡಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಇದರ ಹೊರತಾಗಿ, ಬಿಜೆಪಿ ಪರವಾದ ಹಲವಾರು ಫೇಸ್‌ಬುಕ್ ಖಾತೆಗಳು ಈ ಸಂದೇಶವನ್ನು ಕಳೆದ ಒಂದು ದಿನದಿಂದ ಹಂಚಿಕೊಳ್ಳುತ್ತಿವೆ. ಇದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಜೊತೆಗೆ ವಾಟ್ಸಪ್‌ನಲ್ಲಿಯೂ ಈ ಸಂದೇಶ ವ್ಯಾಪಕವಾಗಿ ಹರಿದಾಡುತ್ತಿದೆ.

ಫ್ಯಾಕ್ಟ್‌‌ಚೆಕ್‌‌

ನ್ಯಾಯಮೂರ್ತಿ ದಲ್ವೀರ್‌ ಸಿಂಗ್‌ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ಯಾವುದೆ ಸುದ್ದಿ ಲಭ್ಯವಿ‌ಲ್ಲ. ಈ ರೀತಿ ನಡೆದಿದ್ದರೆ, ವಿಶ್ವದ ಪ್ರಮುಖ ಸುದ್ದಿ ಮಾಧ್ಯಮಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ವಾಸ್ತವದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆಯೆ ಇಲ್ಲ!.

ದಲ್ವೀರ್‌ ಸಿಂಗ್ ಬಗ್ಗೆ ಹುಡುಕಾಡಿದಾಗ 2017 ರ ಕೆಲವು ವರದಿಗಳು, ಅವರು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಮರು ಆಯ್ಕೆಯಾದರು ಎಂದು ಹೇಳಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

ನಂತರ ಅವರು ನವೆಂಬರ್ 22, 2017 ರಂದು ಚುನಾವಣೆ ನಡೆದು ಎರಡನೇ ಬಾರಿಗೆ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಅವರ ಪ್ರತಿಸ್ಪರ್ಧಿ ಇಂಗ್ಲೇಂಡಿನ ಕ್ರಿಸ್ಟೋಫರ್ ಗ್ರೀನ್‌ವುಡ್ ತನ್ನ ನಾಮಪತ್ರವನ್ನು ವಾಪಾಸು ಪಡೆದುಕೊಂಡಿದ್ದರು. ಹಾಗಾಗಿ ಅವರು ಮರು ಆಯ್ಕೆಯಾದರು.

ಅಂತರಾಷ್ಟ್ರೀಯ ನ್ಯಾಯಾಲಯದ ವೆಬ್‌ಸೈಟ್ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಹುದ್ದೆಯೇ ಇಲ್ಲ. ನ್ಯಾಯಾಲಯವು 15 ಸದಸ್ಯ ನ್ಯಾಯಾಧೀಶರನ್ನು ಹೊಂದಿದ್ದು, ಒಬ್ಬ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಲಾ ಮೂರು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಅಷ್ಟೇ ಅಲ್ಲದೆ, ICJ ವೆಬ್‌ಸೈಟ್‌ನ ಪ್ರಕಾರ, 2021 ರ ಫೆಬ್ರವರಿ 8 ರಂದು ಅಮೆರಿಕದ ಜೋನ್ ಇ. ಡೊನೊಗ್ ಮತ್ತು ರಷ್ಯಾದ ಕಿರಿಲ್ ಗೆವೊರ್ಜಿಯನ್ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಐಸಿಜೆಯಲ್ಲಿ ದಲ್ವೀರ್ ಭಂಡಾರಿ ಅವರ ಹುದ್ದೆ

ಏಪ್ರಿಲ್ 27, 2012 ರಂದು, ದಲ್ವೀರ್ ಭಂಡಾರಿ ಅವರು ICJ ನ 15 ಸದಸ್ಯರ ನ್ಯಾಯಾಧೀಶರಲ್ಲಿ ಒಬ್ಬರಾಗಿ ಆಯ್ಕೆಯಾದರು ಮತ್ತು ಮರುಆಯ್ಕೆಯಾಗಿ ಇಂದಿಗೂ ಮುಂದುವರಿದಿದ್ದಾರೆ.

ಒಟ್ಟಿನಲ್ಲಿ ಮೋದಿ ಸರ್ಕಾರಕ್ಕೂ, ನ್ಯಾಯಮೂರ್ತಿ ದಲ್ವಿರ್‌ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯಾಗಿ ಆಯ್ಕೆಯಾಗುವುದಕ್ಕೂ ಸಂಭಂಧವೇ ಇಲ್ಲ. ಅವರು ಮೋದಿ ಸರಕಾರ ಅಧಿಕಾರಕ್ಕೆ ಬರುವ ಮುನ್ನವೇ ಈ ಸಾಧನೆ ನಡೆದಿರುವುದು ದೃಢಪಟ್ಟಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಮಂಗಳೂರಿನಲ್ಲಿ ಮತ್ಸ್ಯಕನ್ಯೆ ಸಿಕ್ಕಿದೆ ಎಂಬುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...