Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶ ಹೇಳುತ್ತದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಅಷ್ಟೇ ಅಲ್ಲದೆ, “ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು. ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ವಾಟ್ಸಪ್ ಮಾತ್ರವಲ್ಲದೆ, ಫೇಸ್‌ಬುಕ್‌ನಲ್ಲಿ ಕೂಡಾ ಈ ಸಂದೇಶದ ಹರಿದಾಡುತ್ತಿದೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ಕೂಡಾ ನೋಡಬಹುದಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ 

ಫ್ಯಾಕ್ಟ್‌ಚೆಕ್‌

‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೆ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ(PIB) ಸ್ಪಷ್ಟಪಡಿಸಿದೆ. ಈ ಸಂದೇಶವು ಕಳೆದ ವರ್ಷವೆ ವೈರಲ್ ಆಗಿತ್ತು. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ.

ಈ ಬಗ್ಗೆ PIB ಫ್ಯಾಕ್ಟ್‌ಚೆಕ್ ಕೂಡಾ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಒಕ್ಕೂಟ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಿನಲ್ಲಿ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...