Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶ ಹೇಳುತ್ತದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಅಷ್ಟೇ ಅಲ್ಲದೆ, “ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು. ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ವಾಟ್ಸಪ್ ಮಾತ್ರವಲ್ಲದೆ, ಫೇಸ್‌ಬುಕ್‌ನಲ್ಲಿ ಕೂಡಾ ಈ ಸಂದೇಶದ ಹರಿದಾಡುತ್ತಿದೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ಕೂಡಾ ನೋಡಬಹುದಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ 

ಫ್ಯಾಕ್ಟ್‌ಚೆಕ್‌

‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೆ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ(PIB) ಸ್ಪಷ್ಟಪಡಿಸಿದೆ. ಈ ಸಂದೇಶವು ಕಳೆದ ವರ್ಷವೆ ವೈರಲ್ ಆಗಿತ್ತು. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ.

ಈ ಬಗ್ಗೆ PIB ಫ್ಯಾಕ್ಟ್‌ಚೆಕ್ ಕೂಡಾ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಒಕ್ಕೂಟ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಿನಲ್ಲಿ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...