Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶ ಹೇಳುತ್ತದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಅಷ್ಟೇ ಅಲ್ಲದೆ, “ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು. ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ವಾಟ್ಸಪ್ ಮಾತ್ರವಲ್ಲದೆ, ಫೇಸ್‌ಬುಕ್‌ನಲ್ಲಿ ಕೂಡಾ ಈ ಸಂದೇಶದ ಹರಿದಾಡುತ್ತಿದೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ಕೂಡಾ ನೋಡಬಹುದಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ 

ಫ್ಯಾಕ್ಟ್‌ಚೆಕ್‌

‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೆ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ(PIB) ಸ್ಪಷ್ಟಪಡಿಸಿದೆ. ಈ ಸಂದೇಶವು ಕಳೆದ ವರ್ಷವೆ ವೈರಲ್ ಆಗಿತ್ತು. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ.

ಈ ಬಗ್ಗೆ PIB ಫ್ಯಾಕ್ಟ್‌ಚೆಕ್ ಕೂಡಾ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಒಕ್ಕೂಟ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಿನಲ್ಲಿ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...