Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಎಂಬ ಯೋಜನೆಯೆ ಇಲ್ಲ; ಮೋಸ ಹೋಗದಿರಿ!

ಈ ಯೋಜನೆ ಮೂಲಕ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ಎಂದು ವಾಟ್ಸಪ್ ಮತ್ತು ಫೇಸ್‌ಬುಕ್‌ನಲ್ಲಿ ಹರಿಬಿಡಲಾಗುತ್ತಿದೆ

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂದೇಶವು ಹಲವಾರು ವರ್ಷಗಳಿಂದ ಹರಿದಾಡುತ್ತಿದ್ದು, ಯೋಜನೆಗಾಗಿ ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶ ಹೇಳುತ್ತದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು” ಎಂದು ಹೇಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಅಷ್ಟೇ ಅಲ್ಲದೆ, “ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು. ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ವಾಟ್ಸಪ್ ಮಾತ್ರವಲ್ಲದೆ, ಫೇಸ್‌ಬುಕ್‌ನಲ್ಲಿ ಕೂಡಾ ಈ ಸಂದೇಶದ ಹರಿದಾಡುತ್ತಿದೆ. ಅದನ್ನು ಇಲ್ಲಿ, ಇಲ್ಲಿ, ಇಲ್ಲಿ ಕೂಡಾ ನೋಡಬಹುದಾಗಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ 

ಫ್ಯಾಕ್ಟ್‌ಚೆಕ್‌

‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೆ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ(PIB) ಸ್ಪಷ್ಟಪಡಿಸಿದೆ.

ಈ ಸಂದೇಶವು ಕಳೆದ ಕೆಲವು ವರ್ಷಗಳಿಂದ ವೈರಲ್ ಆಗುತ್ತಿದೆ. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ.

ಈ ಬಗ್ಗೆ PIB ಫ್ಯಾಕ್ಟ್‌ಚೆಕ್ ಕೂಡಾ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಒಕ್ಕೂಟ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಿನಲ್ಲಿ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...