Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...