Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...