Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...