Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....