Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

ಫ್ಯಾಕ್ಟ್‌ಚೆಕ್: ಒಮ್ಮೆಲೇ 15 ಚಿತ್ರ ಬಿಡಿಸಿ ಗಿನ್ನೀಸ್ ದಾಖಲೆ ಬರೆದದ್ದು ನಿಜವೇ?

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ವೈರಲ್ ಆಗುತ್ತಿದ್ದು, ಈ ವಿಡಿಯೊವನ್ನು ವೀಕ್ಷಿಸಿದವರು ಇದು ಸಾಧ್ಯವೇ ಎಂದು ಬೆರಗಿನಿಂದ ನೋಡುತ್ತಿದ್ದಾರೆ. ವಿಡಿಯೊದಲ್ಲಿರುವ ದೃಶ್ಯಾವಳಿಯು ನೋಡಿದ ಪ್ರತಿಯೊಬ್ಬರನ್ನೂ ಬೆರಗುಗೊಳಿಸುವಂತೆಯೇ ಇದೆ.

ಮಹಾತ್ಮಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್, ಡಾ.ರಾಜೇಂದ್ರ ಪ್ರಸಾದ್ ಮತ್ತು ಸುಭಾಷ್ ಚಂದ್ರ ಬೋಸ್ ಸೇರಿದಂತೆ ರಾಷ್ಟ್ರನಾಯಕರ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ರಚಿಸುವ ವಿಡಿಯೊ ಇದಾಗಿದೆ ಎಂದು ಪ್ರತಿಪಾದಿಸಲಾಗಿದೆ. ಸದ್ಯ ಈ ವಿಡಿಯೊ  ವೈರಲ್ ಆಗಿದ್ದು, ಓದುಗರ ಕೋರಿಕೆಯನ್ನು ಪರಿಗಣಿಸಿ ‘ಏನ್‌ಸುದ್ದಿ.ಕಾಂ’ ಫ್ಯಾಕ್ಟ್‌ಚೆಕ್ ಮಾಡಿದೆ.

15 ಬೇರೆ ಬೇರೆ ಚಿತ್ರಗಳನ್ನು ಏಕಕಾಲಕ್ಕೆ ರಚಿಸಲು ಸಾಧ್ಯವೆ?  ವೈರಲ್ ವಿಡಿಯೊದಲ್ಲಿರುವ ದೃಶ್ಯಾವಳಿಗಳು ಸತ್ಯವೇ ಎಂದು ‘ಏನ್‌ಸುದ್ದಿ.ಕಾಂ’ ಪರಿಶೀಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಸಾಮಾನ್ಯವಾಗಿ ಒಂದು ನಿಗದಿತ ಸಮಯದಲ್ಲಿ ಒಂದು ವಿಷಯದ ಬಗ್ಗೆ ಗಮನಹರಿಸುವುದೇ ಕಷ್ಟವಾಗಿರುವಾಗ, ಒಮ್ಮೆಲೇ 15 ವಿಭಿನ್ನ ಚಿತ್ರಗಳನ್ನು ರಚಿಸುತ್ತಾರೆ ಎಂಬುವುದನ್ನು ನಂಬುವುದು ಕಷ್ಟ.

ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ ಇಂಡಿಯನ್ ಎಕ್ಸ್‌ಪ್ರೆಸ್, ಮಿಂಟ್, ಟೈಮ್ಸ್‌ನೌ  ಸುದ್ದಿ ಮಾಧ್ಯಮಗಳು ವರದಿಗಳನ್ನು ಪ್ರಕಟಿಸಿವೆ. ಮಹೀಂದ್ರಾ ಗ್ರೂಪ್‌ನ ಚೇರ್‌ಮೆನ್ ಆಗಿರುವ ಆನಂದ್ ಮಹೀಂದ್ರಾರವರು ಟ್ವೀಟ್ ಮಾಡಿದ್ದು, “ಇದು ಹೇಗೆ ಸಾಧ್ಯ? ನಿಜವಾಗಿಯೂ ಆಕೆ ಪ್ರತಿಭಾವಂತ ಕಲಾವಿದೆ. ಆದರೆ ಒಂದೇ ಬಾರಿಗೆ 15 ಭಾವಚಿತ್ರಗಳನ್ನು ರಚಿಸುವುದು ಕಲೆಗಿಂತ ಹೆಚ್ಚು – ಇದು ಒಂದು ಪವಾಡ! ಆಕೆಯ ಬಳಿ ಸಮೀಪದ ಯಾರಾದರೂ ಈ ಸಾಧನೆಯನ್ನು ದೃಢೀಕರಿಸಬಹುದೇ? ನಿಜವಾಗಿದ್ದರೆ, ಆಕೆಯನ್ನು ಪ್ರೋತ್ಸಾಹಿಸಬೇಕು ಮತ್ತು ವಿದ್ಯಾರ್ಥಿವೇತನ, ಇತರ ರೀತಿಯ ಬೆಂಬಲವನ್ನು ಒದಗಿಸಲು ನಾನು ಸಂತೋಷಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಚಿತ್ರಗಳನ್ನು ರಚಿಸಲು ಗಣಕಯಂತ್ರಕ್ಕೆ ಮತ್ತು ಪ್ರೋಗ್ರಾಮ್ ಮಾಡಬಹುದಾದ ರೋಬಾಟ್‌ಗೆ ಮಾತ್ರ ಸಾಧ್ಯ ಎಂದು ಹಲವು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಗಿನ್ನೀಸ್‌ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ನೂರ್ ಜಹಾನ್ ತನ್ನ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ವಿಡಿಯೊಗಳಲ್ಲಿನ ಹೇಳಿಕೆಗಳು ಪ್ರತಿಪಾದಿಸುತ್ತಿವೆ. ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. “ನಾನು ಗಿನ್ನೀಸ್ ವರ್ಲ್ಡ್ ರೆಕಾರ್ಡ್‌ನಲ್ಲಿ ಈ ಹೆಸರನ್ನು ಕ್ರಾಸ್-ಚೆಕ್ ಮಾಡಿದ್ದೇನೆ. ಆದರೆ ಅಂತಹ ಹೆಸರು ಕಂಡುಬಂದಿಲ್ಲ” ಎಂದು ಯೂಟ್ಯೂಬ್ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಕಲಾವಿದರು ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸುವ ವಿಡಿಯೊದ ಸತ್ಯಾಸತ್ಯತೆಯನ್ನು ಪ್ರಶ್ನಿಸುವ ಜನರಿದ್ದಾರೆ. ಹಾಗೆಯೇ ಇದು ನಿಜವೆಂದು ನಂಬುವ ಜನರ ಸಂಖ್ಯೆ ಇನ್ನು ಹೆಚ್ಚಿದೆ ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. “ವಾಹ್ ವಾಟ್ ಎ ಎಡಿಟಿಂಗ್” ಎಂದು ಮತ್ತೊಬ್ಬರು ಕುಟುಕಿದ್ದಾರೆ.

“ಇದು ಪ್ರತಿಭೆ ಅಲ್ಲ. ಇದು ವಂಚನೆ. ಭೌತಿಕವಾಗಿ ಸಾಧ್ಯವಿಲ್ಲದ್ದನ್ನು ಯಾರಿಂದಲೂ ಸಾಧಿಸಲು ಸಾಧ್ಯವಿಲ್ಲ. ಈಗಾಗಲೇ ರಚಿತವಾಗಿರುವ ಅತ್ಯುತ್ತಮವಾದ ಚಿತ್ರಗಳನ್ನು ತಾನೇ ರಚಿಸಿರುವಂತೆ ವಿಡಿಯೊ ಮಾಡಿ ಬಹಿರಂಗಪಡಿಸುತ್ತಿದ್ದಾರೆ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಕನ್ನಡದ ಹಿರಿಯ ಪತ್ರಕರ್ತರು, ಚಿಂತಕರು ಆಗಿರುವ ರಾಜಾರಾಮ್ ತಲ್ಲೂರ್ ಅವರು ವೈರಲ್ ವಿಡಿಯೊ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. “ಇಲ್ಲಿ ವಿಡಿಯೊದಲ್ಲಿ ಹುಡುಗಿಯೊಬ್ಬಾಕೆ ಬೆತ್ತದ ಚೌಕಟ್ಟಿಗೆ ಲಂಬವಾಗಿ ಬಾಲ್ ಪಾಯಿಂಟ್ ಪೆನ್‌ಗಳನ್ನು ಕಟ್ಟಿ, ಅದರಲ್ಲಿ ಏಕಕಾಲಕ್ಕೆ ಹದಿನೈದು ವಿಭಿನ್ನ ಚಿತ್ರಗಳನ್ನು ರಚಿಸಿದ್ದಾಳೆ ಎಂದು ಕ್ಲೇಮ್ ಮಾಡಲಾಗಿದೆ, ಜೊತೆಗೆ ಇದಕ್ಕೆ ಅದೇನೋ ಗಿನ್ನೀಸ್ ರೆಕಾರ್ಡ್ ಕೂಡ ಆಗಿದೆ ಅಂತೆ! ಕಿಲೋಮೀಟರ್ ಗಟ್ಟಲೆ ಪೆನ್ನಲ್ಲಿ ಬರೆದಿರುವ ಸುಶಿಕ್ಷಿತರಿಗೆ, ಹೀಗೆ ಪೆನ್ನುಗಳನ್ನು ಕಟ್ಟಿಕೊಂಡಾಗ ಅಬ್ಬಬ್ಬಾ ಎಂದರೆ ಒಂದೇ ಚಿತ್ರವನ್ನು (ಅದೂ ಕೂಡ ಹಗ್ಗದಲ್ಲಿ ಕಟ್ಟಿದರೆ ಅಸಂಭವ!) ಹದಿನೈದು ಪ್ರತಿ ಮಾಡಬಹುದೇ ಹೊರತು ಹದಿನೈದು ಬೇರೆ ಬೇರೆ ಚಿತ್ರಗಳನ್ನಲ್ಲ ಎಂಬುದು ಯಾಕೆ ತಲೆಗೆ ಹೋಗಲಿಲ್ಲ? ಬಾಲ್ ಪಾಯಿಂಟ್ ಪೆನ್ನಿನ ಮೊನೋಟೋನಿನಲ್ಲಿ ಶೇಡ್ ಗಳನ್ನು ರಚಿಸಲು ಸಾಧ್ಯವಿಲ್ಲ ಎಂದು ಯಾಕೆ ಅರ್ಥ ಆಗಲಿಲ್ಲ? ಈಗ ವಿಡಿಯೊ ಎಡಿಟಿಂಗ್‌ಗಳು ಸಾಧ್ಯ ಇರುವಾಗ ಇಂತಹ ಕಣ್ಕಟ್ಟು ಏನು ಬೇಕಾದರೂ ಮಾಡಬಹುದು ಎಂಬ ಸಾಧ್ಯತೆ ಯಾಕೆ ತಲೆಗೆ ಹೊಳೆಯಲಿಲ್ಲ?” ಎಂದು  ವೈರಲ್ ವಿಡಿಯೊ ಕುರಿತಾಗಿ ರಾಜಾರಾಮ್‌ ತಲ್ಲೂರು ಪ್ರಶ್ನೆಯನ್ನು ಎತ್ತಿದ್ದಾರೆ.

ವೈರಲ್ ವಿಡಿಯೊದ ಕೊನೆಯಲ್ಲಿ ಮೊಬೈಲ್ ಸಂಖ್ಯೆಯೊಂದನ್ನು ನೀಡಲಾಗಿದ್ದು, ‘ಏನ್‌ಸುದ್ದಿ.ಕಾಂ’ ಈ ಸಂಖ್ಯೆಗೆ ಸಂಪರ್ಕಿಸಿದೆ. ಕರೆಯನ್ನು ಸ್ವೀಕರಿಸಿದ ಮಹಿಳೆ, “ನಾನು ಆಕೆಯ ಸಹೋದರಿ. ನೂರ್‌ಜಹಾನ್ ಸಂಪರ್ಕಿಸಲು ಸಂಜೆಗೆ ಕರೆ ಮಾಡಿ” ಎಂದು ತಿಳಿಸಿದ್ದರು. ಪುನಃ 27 ಅಕ್ಟೋಬರ್ 2022ರ ಸಂಜೆ ಮತ್ತೆ ಸಂಪರ್ಕಿಸಿ ವಿಡಿಯೊ ವೈರಲ್ ಆಗುತ್ತಿರುವ ಬಗ್ಗೆ ವಿಚಾರಿಸಿ ಮಾಹಿತಿ ಕೇಳಿದಾಗ, “ನೂರ್‌ಜಹಾನ್ ವಿಡಿಯೊ ನಿಜ”ವೆಂದು ತಿಳಿಸಿದ್ದಾರೆ.

“ಆದರೆ ಹಲವರು ಈ ವಿಡಿಯೊ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ, ಒಮ್ಮೆಲೇ 15 ಬೇರೆ ಬೇರೆ ಚಿತ್ರಗಳನ್ನು ಬಿಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದಾಗ, “ನಿರಂತರ ಅಭ್ಯಾಸದಿಂದ ಈ ರೀತಿ ಚಿತ್ರ ಬಿಡಿಸಲು ಸಾಧ್ಯವಾಗಿದೆ. ಈ ವಿಡಿಯೊ ಫೇಕ್ ಅಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದುವರಿದು, “ಒಂದು ಲೈವ್ ಮೂಲಕ ಇದೇ ಚಿತ್ರವನ್ನು ರಚಿಸಲು ಸಾಧ್ಯವೇ?” ಎಂದು ಕೋರಿದಾಗ ನೂರ್‌ಜಹಾನ್, “ಲೈವ್ ವಿಡಿಯೊ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ. ಹಾಗಾಗಿ ಈ ವಿಡಿಯೊದ ದೃಶ್ಯಾವಳಿಗಳು ನಂಬಲು ವಿಶ್ವಾಸಾರ್ಹವಲ್ಲ.

ನೂರ್‌ಜಹಾನ್ ಅವರ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ದಾಖಲೆ ಇಲ್ಲ. ವೈರಲ್ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಜಯ್ ಮೀನಾ ಎಂಬ ಯೂಟ್ಯೂಬರ್‌‌ ಇದು ಸಾಧ್ಯ ಎಂದಿದ್ದಾರೆ. ಈ ಹೆಸರಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ FACTLY  ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಆದರೆ ನೂರ್‌ಜಹಾನ್ ನಿಜವಾಗಿಯೂ ಒಂದೇ ಕೈಯಿಂದ 15 ಭಾವಚಿತ್ರಗಳನ್ನು ಏಕಕಾಲದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳುವ ಅಜಯ್ ಮೀನಾ, ಇದು ಒಂದು ದಿನದಲ್ಲಿ ರಚಿಸಿದ ಚಿತ್ರವಲ್ಲ ಎಂದಿದ್ದಾರೆ. ಆದರೆ ನೂರ್ ಜಹಾನ್ ಪ್ರತಿನಿತ್ಯ ಕೆಲವು ಗಂಟೆಗಳ ಕಾಲ ಚಿತ್ರ ರಚನೆ ಮಾಡುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಭಾವಚಿತ್ರಗಳನ್ನು ಬಿಡಿಸಿದ್ದಾರೆ ಎಂದಿದ್ದಾರೆ.

ಆದರೆ, ಇಂತಹ ಸಾಧನೆಯ ಸಾಧ್ಯತೆಯ ಬಗ್ಗೆ ಅನುಮಾನಗಳಿವೆ ಮತ್ತು ವಾಸ್ತವವಾಗಿ ವಿಡಿಯೊದ ದೃಢೀಕರಣವನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಆಕೆಯ ಹೆಸರಿನಲ್ಲಿ ಯಾವುದೇ ಗಿನ್ನೀಸ್‌ ವಿಶ್ವ ದಾಖಲೆ ಇಲ್ಲದ ಕಾರಣ, ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ ಎಂದು ಫ್ಯಾಕ್ಟ್‌ಲಿ ವರದಿ ಸ್ಪಷ್ಟಪಡಿಸಿದೆ.

ಇದು ಹಂತಹಂತವಾಗಿ ಬಿಡಿಸಿದ ಚಿತ್ರವನ್ನು ಎಡಿಟ್ ಮಾಡಿ ಹರಿಯಬಿಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೆ ಫೇಸ್‌ಬುಕ್ ಲೈವ್ ಮೂಲಕ ವಿಡಿಯೊ ಮಾಡಲು ನೂರ್ ಜಹಾನ್ ನಿರಾಕರಿಸಿದ್ದಾರೆ. ಹಾಗಾಗಿ ಏಕಕಾಲದಲ್ಲಿ 15 ಚಿತ್ರಗಳನ್ನು ಬಿಡಿಸಿರುವುದಕ್ಕೆ ದಾಖಲೆಗಳಿಲ್ಲ ಎಂದು ಹೇಳಬಹುದಾಗಿದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ (ಕನ್ನಡದ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...