Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...