Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...