Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...