Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...