Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...