Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...