Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....