Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...