Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...