Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...