Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

ಫ್ಯಾಕ್ಟ್‌ಚೆಕ್: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ನಿಜವೇ?

- Advertisement -
- Advertisement -

ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಪೊಲೀಸ್ ಸಿಬ್ಬಂದಿಗಳು ಮಸೀದಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಚಿತ್ರವನ್ನು ಗೂಗಲ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ 2016ರ ಜೂನ್ 26 ರಂದು ಎಕೆ ನ್ಯೂಸ್ ಚಾನೆಲ್ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ಇದೇ ರೀತಿಯ ಫೋಟೊವೊಂದು ಕಂಡುಬಂದಿದೆ. ರಂಜಾಬ್ ಹಬ್ಬದ ಹಿನ್ನೆಲೆಯಲ್ಲಿ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಭೈಂಸಾದಲ್ಲಿನ ಪಂಜೆಶಾ ಮಸೀದಿಯನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಎಂದು ಚಾನೆಲ್ ವರದಿ ಮಾಡಿದೆ. ಹಲವಾರು ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಆದಿಲಾಬಾದ್ ಪೊಲೀಸರು ದೇವಾಸ್ಥಾನಗಳು ಮತ್ತು ಮಸೀದಿಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಇದೇ ರೀತಿಯ ಫೊಟೊಗಳನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೀ ವರ್ಡ್‌ಗಳನ್ನು ಬಳಸಿ ಹುಡುಕಿದಾಗ 2016ರ ಜೂನ್ 20 ರಂದು ತೆಲಂಗಾಣ ರಾಜ್ಯ ಪೊಲೀಸ್ ಪ್ರಕಟಿಸಿ ಫೇಸ್‌ಬುಕ್ ಪೋಸ್ಟ್ ಒಂದು ಕಂಡುಬಂದಿದೆ. ಅದರಲ್ಲಿ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಗಿಡಗಳನ್ನು ನೆಟ್ಟು, ದೇವಾಸ್ಥಾನ ಮತ್ತು ಮಸೀದಿಗಳನ್ನು ಸ್ವಚ್ಚಗೊಳಿಸಿದರು ಎಂದು ವಿವರಣೆ ನೀಡಲಾಗಿದೆ.

ಈಟಿವಿ ತೆಲಂಗಾಣ ನ್ಯೂಸ್ ಚಾನೆಲ್ ಆದಿಲಾಬಾದ್ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಸ್ವಚ್ಛ ಭಾರತ ಅಭಿಯಾನ ನಡೆಸಿದ್ದರ ಕುರಿತು ಹಲವು ವಿಡಿಯೋಗಳನ್ನು ಪ್ರಕಟಿಸಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ‘ಈಟಿವಿ ತೆಲಂಗಾಣ’ ಸುದ್ದಿ ವಾಹಿನಿ ಪ್ರಕಟಿಸಿದ ವಿಡಿಯೋದಲ್ಲಿ ನಿರ್ಮಲ್ ಪೊಲೀಸರು ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವುದನ್ನು ನೋಡಬಹುದು. ಈ ಎಲ್ಲಾ ಸಾಕ್ಷಿಗಳಿಂದ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋ ಹಳೆಯದಾಗಿದೆ ಮತ್ತು ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿಲ್ಲ ಎಂದು ತೀರ್ಮಾನಿಸಬಹುದು, ಆದರೆ ತಪ್ಪುದಾರಿಗೆಳೆಯುವ ಕೋಮುವಾದಿ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ 2016ರ ತೆಲಂಗಾಣದಲ್ಲಿನ ಸ್ವಚ್ಛ ಭಾರತ ಅಭಿಯಾನದ ದೃಶ್ಯಗಳನ್ನು ಬಂಗಾಳದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ಎಂದು ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...