Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವಿಡಿಯೊದಲ್ಲಿ, ಚಿನ್ನಾಭರಣಗಳನ್ನು ಸಾಲಾಗಿ ಜೋಡಿಸಿಟ್ಟಿರುವುದು ಮತ್ತು ಒಂದಷ್ಟು ಜನರು ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಇರುವುದು ಕಾಣಬಹುದಾಗಿದೆ.

“ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ , 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ವಾಟ್ಸಪ್‌ನಲ್ಲಿ ಸತತವಾಗಿ ವಿಡಿಯೊ ಹರಿದಾಡುತ್ತಿದೆ. ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಸಂದೇಶಗಳು ಬಂದಿವೆ.

ವಿಡಿಯೊ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆ ಕೇಳಿ ನಾನುಗೌರಿ.ಕಾಂ ಗೆ ಬಂದಿರುವ ಸಂದೇಶ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ವಿಡಿಯೊ ಫೇಸ್‌ಬುಕ್‌‌ನಲ್ಲಿ ಕೂಡಾ ಹರಿದಾಡುತ್ತಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಅಲ್ಲಿ ಕೂಡಾ ವಿಡಿಯೊ ಜೊತೆಗಿನ ಸಂದೇಶವು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದಂತೆ ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ ಸಿಕ್ಕ ಆಭರಣಗಳು ಎಂದು ಪ್ರತಿಪಾದಿಸುತ್ತಿದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸುಮಾರು 37 ಸೆಕೆಂಡಿನ ಈ ವಿಡಿಯೊವನ್ನು ಅದೇ ಪ್ರತಿಪಾದನೆಯೊಂದಿಗೆ ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ. ಅದನ್ನು ಇಲ್ಲಿ ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ತಿರುಪತಿ ದೇವಸ್ಥಾನದ ಮಾಜಿ ಟ್ರಸ್ಟಿ ಜೆ. ಸೇಕರ್‌ ರೆಡ್ಡಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು ಎಂದು ಪ್ರತಿಪಾದಿಸಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಅವರುಗಳ ಆರ್ಕೈವ್ ಲಿಂಕ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ಫ್ಯಾಕ್ಟ್‌‌ಚೆಕ್‌

ವಾಸ್ತವದಲ್ಲಿ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ನಾವು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್‌ ಡಿಸೆಂಬರ್‌ 22, 2021 ರಂದು ವರದಿ ಮಾಡಿತ್ತು.

ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ. ಇದನ್ನು ಹಲವಾರು ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್‌ ಚಾನೆಲ್‌ಗಳು ಪ್ರಸಾರ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ದರೋಡೆಯ ಘಟನೆಯು ಡಿಸೆಂಬರ್ 14, 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಹೀಗಾಗಿ ಈ ವಿಡಿಯೊಗೂ ತಿರುಪತಿ ದೇವಾಲಯಕ್ಕೂ ಯಾವುದೆ ಸಂಬಂಧವಿಲ್ಲ. ಆದರೆ 2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಈ ಐಟಿ ದಾಳಿಗಳ ನಂತರ ಆಂಧ್ರಪ್ರದೇಶ ಸರ್ಕಾರ ಸೇಕರ್ ರೆಡ್ಡಿ ಅವರನ್ನು ಟಿಟಿಡಿ ಸದಸ್ಯತ್ವದಿಂದ ತೆಗೆದುಹಾಕಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಶೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದಾಗ್ಯೂ, ಆಗಸ್ಟ್ 2021 ರಲ್ಲಿ ರಚಿತವಾದ ಹೊಸ ಮಂಡಳಿಯಲ್ಲಿ ಅವರನ್ನು ಸೇರಿಸಲಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೆ ಸಂಬಂಧವಿಲ್ಲ. ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಪಟ್ಟದ್ದಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...