Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪುರೋಹಿತರೊಬ್ಬರ ಮನೆಗೆ ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರದ ದೃಶ್ಯಗಳು ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದೆ. ವಿಡಿಯೊದಲ್ಲಿ, ಚಿನ್ನಾಭರಣಗಳನ್ನು ಸಾಲಾಗಿ ಜೋಡಿಸಿಟ್ಟಿರುವುದು ಮತ್ತು ಒಂದಷ್ಟು ಜನರು ಪೊಲೀಸ್‌ ಯೂನಿಫಾರ್ಮ್‌ನಲ್ಲಿ ಇರುವುದು ಕಾಣಬಹುದಾಗಿದೆ.

“ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ , 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ವಾಟ್ಸಪ್‌ನಲ್ಲಿ ಸತತವಾಗಿ ವಿಡಿಯೊ ಹರಿದಾಡುತ್ತಿದೆ. ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡುವಂತೆ ನಾನುಗೌರಿ.ಕಾಂಗೆ ಸಂದೇಶಗಳು ಬಂದಿವೆ.

ವಿಡಿಯೊ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆ ಕೇಳಿ ನಾನುಗೌರಿ.ಕಾಂ ಗೆ ಬಂದಿರುವ ಸಂದೇಶ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ವಿಡಿಯೊ ಫೇಸ್‌ಬುಕ್‌‌ನಲ್ಲಿ ಕೂಡಾ ಹರಿದಾಡುತ್ತಿದ್ದು, ನೂರಾರು ಜನರು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಅಲ್ಲಿ ಕೂಡಾ ವಿಡಿಯೊ ಜೊತೆಗಿನ ಸಂದೇಶವು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದಂತೆ ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ ಸಿಕ್ಕ ಆಭರಣಗಳು ಎಂದು ಪ್ರತಿಪಾದಿಸುತ್ತಿದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಹಲವಾರು ಜನರು ಹಂಚಿಕೊಂಡಿದ್ದು ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸುಮಾರು 37 ಸೆಕೆಂಡಿನ ಈ ವಿಡಿಯೊವನ್ನು ಅದೇ ಪ್ರತಿಪಾದನೆಯೊಂದಿಗೆ ಯೂಟ್ಯೂಬ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ. ಅದನ್ನು ಇಲ್ಲಿ ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ತಿರುಪತಿ ದೇವಸ್ಥಾನದ ಮಾಜಿ ಟ್ರಸ್ಟಿ ಜೆ. ಸೇಕರ್‌ ರೆಡ್ಡಿ ಅವರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣಗಳು ಎಂದು ಪ್ರತಿಪಾದಿಸಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಅವರುಗಳ ಆರ್ಕೈವ್ ಲಿಂಕ್‌ ಅನ್ನು ಇಲ್ಲಿ ವೀಕ್ಷಿಸಿ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ಫ್ಯಾಕ್ಟ್‌‌ಚೆಕ್‌

ವಾಸ್ತವದಲ್ಲಿ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೇ ಸಂಬಂಧವೇ ಇಲ್ಲ. ಈ ಬಗ್ಗೆ ನಾವು ರಿವರ್ಸ್ ಸರ್ಚ್ ಮೂಲಕ ಹುಡುಕಾಡಿದಾಗ, ಇದು ಇತ್ತೀಚೆಗೆ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್‌ ಡಿಸೆಂಬರ್‌ 22, 2021 ರಂದು ವರದಿ ಮಾಡಿತ್ತು.

ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ. ಇದನ್ನು ಹಲವಾರು ತಮಿಳು ಸುದ್ದಿ ವೆಬ್‌ಸೈಟ್‌ಗಳು ತಮ್ಮ ಯೂಟ್ಯೂಬ್‌ ಚಾನೆಲ್‌ಗಳು ಪ್ರಸಾರ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ದರೋಡೆಯ ಘಟನೆಯು ಡಿಸೆಂಬರ್ 14, 2021 ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ತನಿಖೆಯ ನಂತರ ವೆಲ್ಲೂರು ಪೊಲೀಸರು ವೆಲ್ಲೂರಿನ ಸ್ಮಶಾನದಲ್ಲಿ ಹೂತಿಟ್ಟಿದ್ದ ಎಲ್ಲಾ ಕದ್ದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಸ್ ಅಲುಕ್ಕಾಸ್ ಶೋರೂಂನಿಂದ ಚಿನ್ನ ಮತ್ತು ವಜ್ರಗಳನ್ನು ದರೋಡೆ ಮಾಡಿದ್ದ ಆರೋಪಿ ಡೀಕಾರಾಮನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಹೀಗಾಗಿ ಈ ವಿಡಿಯೊಗೂ ತಿರುಪತಿ ದೇವಾಲಯಕ್ಕೂ ಯಾವುದೆ ಸಂಬಂಧವಿಲ್ಲ. ಆದರೆ 2016ರಲ್ಲಿ ತಿರುಪತಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದ ಜೆ. ಶೇಕರ್ ರೆಡ್ಡಿ ಅವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹100 ಕೋಟಿ ನಗದು ಹಾಗೂ 120 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದರು. ಈ ಐಟಿ ದಾಳಿಗಳ ನಂತರ ಆಂಧ್ರಪ್ರದೇಶ ಸರ್ಕಾರ ಸೇಕರ್ ರೆಡ್ಡಿ ಅವರನ್ನು ಟಿಟಿಡಿ ಸದಸ್ಯತ್ವದಿಂದ ತೆಗೆದುಹಾಕಿತ್ತು.

ಆದರೆ, ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ 2020 ರ ಸೆಪ್ಟೆಂಬರ್‌ನಲ್ಲಿ ಶೇಕರ್ ರೆಡ್ಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣವನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿತ್ತು. ಪ್ರಕರಣವನ್ನು ವಜಾ ಮಾಡಿದ ನಂತರ ಶೇಕರ್ ರೆಡ್ಡಿ ಮತ್ತೇ ತಿರುಪತಿ ಆಡಳಿತ ಮಂಡಳಿಗೆ ಸೇರಿದ್ದರು. ಆದಾಗ್ಯೂ, ಆಗಸ್ಟ್ 2021 ರಲ್ಲಿ ರಚಿತವಾದ ಹೊಸ ಮಂಡಳಿಯಲ್ಲಿ ಅವರನ್ನು ಸೇರಿಸಲಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ತಿರುಪತಿ ದೇವಸ್ಥಾನಕ್ಕೂ ಯಾವುದೆ ಸಂಬಂಧವಿಲ್ಲ. ವೈರಲ್‌ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ, ತಮಿಳುನಾಡಿನ ವೆಲ್ಲೂರಿನಲ್ಲಿ ಇತ್ತೀಚೆಗೆ ನಡೆದ ದರೋಡೆಗೆ ಸಂಬಂಧಪಟ್ಟದ್ದಾಗಿದೆ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...