Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ...

ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

- Advertisement -
- Advertisement -

“ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್‌ಗಳನ್ನು (Free Laptop) ವಿತರಿಸುತ್ತಿದ್ದು, ಅದಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ” ಎಂದು ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. ಈ ಸಂದೇಶದ ಜೊತೆಗೆ ಲಿಂಕ್‌ ಕೂಡಾ ಇದ್ದು, ಲಿಂಕ್‌ನಲ್ಲಿ, “ಭಾರತ ಸರ್ಕಾರ | ಶಿಕ್ಷಣ ಸಚಿವಾಲಯ” ಎಂಬ ಬರಹದೊಂದಿಗೆ ಲಾಷ್ಟ್ರ ಲಾಂಛನವಾದ ಅಶೋಕ ಸ್ತಂಭದ ಸಿಂಹಗಳ ಚಿತ್ರವು ಕಾಣುತ್ತದೆ.

ಮತ್ತೊಂದು ಸಂದೇಶದಲ್ಲಿ ಕೊರೊನಾ ಕಾರಣಕ್ಕೆ ಆನ್‌ಲೈನ್ ತರಗತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದ್ದು ದೇಶಾದ್ಯಂತ ಎಲ್ಲಾ ಜನರಿಗೆ 5 ಲಕ್ಷ ಉಚಿತ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಮುಂದಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಾಟ್ಸಾಪ್‌ ಮತ್ತು  ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಆದರೆ, ಕೇಂದ್ರ ಸರ್ಕಾರ ನಿಜವಾಗಿಯೂ ಅಂತಹ ಯೋಜನೆಯನ್ನು ಘೋಷಿಸಿದೆಯೇ? ವೈರಲ್‌ ಸಂದೇಶದ ಸತ್ಯಾಸತ್ಯತೆ ಏನು ಎಂಬುವುದನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ ಅನ್ನು ಸರ್ಚ್‌ ಮಾಡಿ ವೈರಲ್ ಪೋಸ್ಟ್‌ನಲ್ಲಿ ಇರುವ ಯೋಜನೆಯನ್ನು ಕುರಿತು ಪರಿಶೀಲಿಸಿದಾಗ ಕೆಂದ್ರ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಜಾರಿ ಮಾಡಿದೆ ಎನ್ನುವ ಬಗ್ಗೆ ಯಾವ ಸುಳಿವು ಲಭ್ಯವಾಗಿಲ್ಲ.

ವಾಟ್ಸಾಪ್ ಸಂದೇಶದಲ್ಲಿ ಲಭ್ಯವಾಗಿರುವ ಲಿಂಕ್‌ಅನ್ನು ಪರಿಶೀಲಿಸಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿದಾಗ ಒಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರನ್ನು ದಾಖಲಿಸುವಂತೆ ಕೇಳುತ್ತದೆ. ಅದನ್ನು ದಾಖಲಿಸಿ ಮುಂದುವರೆದರೆ, “ಪರಿಶೀಲನೆಯ ನಂತರ, ಉಚಿತ ಲ್ಯಾಪ್‌ಟಾಪ್ ಪಡೆಯಲು ನೀವು ಅರ್ಹತೆ ಪಡೆದಿದ್ದೀರಿ” ಎಂದು ಹೇಳಿ ಕೆಳಗಿನ ಮೂರು ಷರತ್ತನ್ನು ಇಟ್ಟು, ಅದನ್ನು ಪೂರೈಸುವಂತೆ ಕೇಳತ್ತದೆ.

  1. WhatsApp ನಲ್ಲಿ 5 ಗುಂಪುಗಳು ಅಥವಾ 15 ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ (ಕೆಳಗಿನ “SHARE” ಐಕಾನ್ ಮೇಲೆ ಕ್ಲಿಕ್ ಮಾಡಿ).
  2. ಶೇರ್‌ ಮಾಡಿದಾಗ ಹಸಿರು ಬಾಕ್ಸ್‌ ಭರ್ತಿಯಾಗಿ ಶಿಕ್ಷಣ ಇಲಾಖೆ ಪುಟ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತದೆ.
  3. ಇದರ ದೃಢೀಕರಣವನ್ನು ನೀವು 15 ನಿಮಿಷಗಳಲ್ಲಿ SMS ಮೂಲಕ ಪಡೆಯುತ್ತೀರಿ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್

ಈ ಹಂತಗಳು ಮುಗಿದ ನಂತರ, ಅರ್ಜಿದಾರರ ವೈಯುಕ್ತಿಕ ವಿವರಗಳ್ನು ಕೇಳಲು ಪ್ರಾರಂಭಿಸುತ್ತದೆ.

ವಾಸ್ತವವಾಗಿ ಯಾವುದೇ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಿವರವನ್ನು ಕೇಳಲಾಗುತ್ತದೆ. ಆದರೆ ಯೋಜನೆ ಬಗ್ಗೆ ಇತರೆ 5 ವಾಟ್ಸಾಪ್ ಗುಂಪುಗಳಿಗೆ ಹಂಚಿಕೆ ಮಾಡಿ ಎಂದು ಕೇಳುವುದಿಲ್ಲ. ಹಸಿರು ಬಾಕ್ಸ್‌ ಭರ್ತಿ ಆದ ನಂತರ ಶಿಕ್ಷಣ ಇಲಾಖೆ ಪುಟ ಸ್ವಯಂ ಚಾಲಿತವಾಗಿ ತೆರೆದುಕೊಳ್ಳುತ್ತದೆ ಎಂಬ ನಿಯಮ ಇರುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗಲೇ ಇದು ಕೇಂದ್ರ ಸರ್ಕಾರದ ಯೋಜನೆ ಅಲ್ಲ ಎಂದು ಖಚಿತವಾಗುತ್ತದೆ.

ಅಷ್ಟೆ ಅಲ್ಲದೆ, ವೈರಲ್ ಸಂದೇಶದ ಬಗ್ಗೆ ತನಿಖೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ಉಚಿತ ಲ್ಯಾಪ್‌ಟಾಪ್  ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಆದರೆ ಇದು ನಕಲಿ ಎಂದು ಪಿಐಬಿ ಹೇಳಿದೆ.

ಇಷ್ಟೆ ಅಲ್ಲದೆ,️ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ ಎಂದು ಪಿಐಬಿ ಹೇಳಿದ್ದು, “ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಶೇರ್ ಮಾಡಬೇಡಿ ಹಾಗೂ️ ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ಹೇಳಿದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತಿದೆ ಎಂದು ಈ ಹಿಂದೆಯೂ ಇಂತಹದೇ ಪೋಸ್ಟ್‌  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದು ನಕಲಿ ಎಂದು ಏನ್‌ ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಅದನ್ನು ನಕಲಿ ಎಂದು ನಿರೂಪಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಅದನ್ನು ಓದುಗರು ಇಲ್ಲಿ ನೋಡಬಹುದು. ಈ ಜಾಹೀರಾತನ್ನು ನೀವು ಎಲ್ಲಾದರೂ ನೋಡಿದ್ದರೆ ಅಥವಾ ವಾಟ್ಸಾಪ್‌ನಲ್ಲಿ ನಿಮಗೆ ಬಂದಿದ್ದರೆ, ಅದನ್ನು ನಂಬಬೇಡಿ ಎಂದು ಪಿಐಬಿ ಎಚ್ಚರಿಸಿದೆ. ಅದರಲ್ಲಿ ನೀಡಿರುವ ಸಂಖ್ಯೆಗೆ ಯಾವುದೇ SMS ಕಳುಹಿಸಬೇಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ನೀವು ವಂಚನೆಗೆ ಬಲಿಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ವಂಚನೆಯ ಬಗ್ಗೆ ಇತರರಿಗೂ ಅರಿವು ಮೂಡಿಸಿ. ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು ನಮ್ಮ ವಾಟ್ಸಪ್‌ ನಂಬರ್‌‌ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...