Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ...

ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

- Advertisement -
- Advertisement -

“ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್‌ಗಳನ್ನು (Free Laptop) ವಿತರಿಸುತ್ತಿದ್ದು, ಅದಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ” ಎಂದು ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. ಈ ಸಂದೇಶದ ಜೊತೆಗೆ ಲಿಂಕ್‌ ಕೂಡಾ ಇದ್ದು, ಲಿಂಕ್‌ನಲ್ಲಿ, “ಭಾರತ ಸರ್ಕಾರ | ಶಿಕ್ಷಣ ಸಚಿವಾಲಯ” ಎಂಬ ಬರಹದೊಂದಿಗೆ ಲಾಷ್ಟ್ರ ಲಾಂಛನವಾದ ಅಶೋಕ ಸ್ತಂಭದ ಸಿಂಹಗಳ ಚಿತ್ರವು ಕಾಣುತ್ತದೆ.

ಮತ್ತೊಂದು ಸಂದೇಶದಲ್ಲಿ ಕೊರೊನಾ ಕಾರಣಕ್ಕೆ ಆನ್‌ಲೈನ್ ತರಗತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದ್ದು ದೇಶಾದ್ಯಂತ ಎಲ್ಲಾ ಜನರಿಗೆ 5 ಲಕ್ಷ ಉಚಿತ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಮುಂದಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಾಟ್ಸಾಪ್‌ ಮತ್ತು  ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಆದರೆ, ಕೇಂದ್ರ ಸರ್ಕಾರ ನಿಜವಾಗಿಯೂ ಅಂತಹ ಯೋಜನೆಯನ್ನು ಘೋಷಿಸಿದೆಯೇ? ವೈರಲ್‌ ಸಂದೇಶದ ಸತ್ಯಾಸತ್ಯತೆ ಏನು ಎಂಬುವುದನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ ಅನ್ನು ಸರ್ಚ್‌ ಮಾಡಿ ವೈರಲ್ ಪೋಸ್ಟ್‌ನಲ್ಲಿ ಇರುವ ಯೋಜನೆಯನ್ನು ಕುರಿತು ಪರಿಶೀಲಿಸಿದಾಗ ಕೆಂದ್ರ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಜಾರಿ ಮಾಡಿದೆ ಎನ್ನುವ ಬಗ್ಗೆ ಯಾವ ಸುಳಿವು ಲಭ್ಯವಾಗಿಲ್ಲ.

ವಾಟ್ಸಾಪ್ ಸಂದೇಶದಲ್ಲಿ ಲಭ್ಯವಾಗಿರುವ ಲಿಂಕ್‌ಅನ್ನು ಪರಿಶೀಲಿಸಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿದಾಗ ಒಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರನ್ನು ದಾಖಲಿಸುವಂತೆ ಕೇಳುತ್ತದೆ. ಅದನ್ನು ದಾಖಲಿಸಿ ಮುಂದುವರೆದರೆ, “ಪರಿಶೀಲನೆಯ ನಂತರ, ಉಚಿತ ಲ್ಯಾಪ್‌ಟಾಪ್ ಪಡೆಯಲು ನೀವು ಅರ್ಹತೆ ಪಡೆದಿದ್ದೀರಿ” ಎಂದು ಹೇಳಿ ಕೆಳಗಿನ ಮೂರು ಷರತ್ತನ್ನು ಇಟ್ಟು, ಅದನ್ನು ಪೂರೈಸುವಂತೆ ಕೇಳತ್ತದೆ.

  1. WhatsApp ನಲ್ಲಿ 5 ಗುಂಪುಗಳು ಅಥವಾ 15 ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ (ಕೆಳಗಿನ “SHARE” ಐಕಾನ್ ಮೇಲೆ ಕ್ಲಿಕ್ ಮಾಡಿ).
  2. ಶೇರ್‌ ಮಾಡಿದಾಗ ಹಸಿರು ಬಾಕ್ಸ್‌ ಭರ್ತಿಯಾಗಿ ಶಿಕ್ಷಣ ಇಲಾಖೆ ಪುಟ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತದೆ.
  3. ಇದರ ದೃಢೀಕರಣವನ್ನು ನೀವು 15 ನಿಮಿಷಗಳಲ್ಲಿ SMS ಮೂಲಕ ಪಡೆಯುತ್ತೀರಿ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್

ಈ ಹಂತಗಳು ಮುಗಿದ ನಂತರ, ಅರ್ಜಿದಾರರ ವೈಯುಕ್ತಿಕ ವಿವರಗಳ್ನು ಕೇಳಲು ಪ್ರಾರಂಭಿಸುತ್ತದೆ.

ವಾಸ್ತವವಾಗಿ ಯಾವುದೇ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಿವರವನ್ನು ಕೇಳಲಾಗುತ್ತದೆ. ಆದರೆ ಯೋಜನೆ ಬಗ್ಗೆ ಇತರೆ 5 ವಾಟ್ಸಾಪ್ ಗುಂಪುಗಳಿಗೆ ಹಂಚಿಕೆ ಮಾಡಿ ಎಂದು ಕೇಳುವುದಿಲ್ಲ. ಹಸಿರು ಬಾಕ್ಸ್‌ ಭರ್ತಿ ಆದ ನಂತರ ಶಿಕ್ಷಣ ಇಲಾಖೆ ಪುಟ ಸ್ವಯಂ ಚಾಲಿತವಾಗಿ ತೆರೆದುಕೊಳ್ಳುತ್ತದೆ ಎಂಬ ನಿಯಮ ಇರುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗಲೇ ಇದು ಕೇಂದ್ರ ಸರ್ಕಾರದ ಯೋಜನೆ ಅಲ್ಲ ಎಂದು ಖಚಿತವಾಗುತ್ತದೆ.

ಅಷ್ಟೆ ಅಲ್ಲದೆ, ವೈರಲ್ ಸಂದೇಶದ ಬಗ್ಗೆ ತನಿಖೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ಉಚಿತ ಲ್ಯಾಪ್‌ಟಾಪ್  ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಆದರೆ ಇದು ನಕಲಿ ಎಂದು ಪಿಐಬಿ ಹೇಳಿದೆ.

ಇಷ್ಟೆ ಅಲ್ಲದೆ,️ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ ಎಂದು ಪಿಐಬಿ ಹೇಳಿದ್ದು, “ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಶೇರ್ ಮಾಡಬೇಡಿ ಹಾಗೂ️ ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ಹೇಳಿದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತಿದೆ ಎಂದು ಈ ಹಿಂದೆಯೂ ಇಂತಹದೇ ಪೋಸ್ಟ್‌  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದು ನಕಲಿ ಎಂದು ಏನ್‌ ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಅದನ್ನು ನಕಲಿ ಎಂದು ನಿರೂಪಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಅದನ್ನು ಓದುಗರು ಇಲ್ಲಿ ನೋಡಬಹುದು. ಈ ಜಾಹೀರಾತನ್ನು ನೀವು ಎಲ್ಲಾದರೂ ನೋಡಿದ್ದರೆ ಅಥವಾ ವಾಟ್ಸಾಪ್‌ನಲ್ಲಿ ನಿಮಗೆ ಬಂದಿದ್ದರೆ, ಅದನ್ನು ನಂಬಬೇಡಿ ಎಂದು ಪಿಐಬಿ ಎಚ್ಚರಿಸಿದೆ. ಅದರಲ್ಲಿ ನೀಡಿರುವ ಸಂಖ್ಯೆಗೆ ಯಾವುದೇ SMS ಕಳುಹಿಸಬೇಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ನೀವು ವಂಚನೆಗೆ ಬಲಿಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ವಂಚನೆಯ ಬಗ್ಗೆ ಇತರರಿಗೂ ಅರಿವು ಮೂಡಿಸಿ. ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು ನಮ್ಮ ವಾಟ್ಸಪ್‌ ನಂಬರ್‌‌ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...