Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ...

ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

- Advertisement -
- Advertisement -

“ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್‌ಗಳನ್ನು (Free Laptop) ವಿತರಿಸುತ್ತಿದ್ದು, ಅದಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ” ಎಂದು ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. ಈ ಸಂದೇಶದ ಜೊತೆಗೆ ಲಿಂಕ್‌ ಕೂಡಾ ಇದ್ದು, ಲಿಂಕ್‌ನಲ್ಲಿ, “ಭಾರತ ಸರ್ಕಾರ | ಶಿಕ್ಷಣ ಸಚಿವಾಲಯ” ಎಂಬ ಬರಹದೊಂದಿಗೆ ಲಾಷ್ಟ್ರ ಲಾಂಛನವಾದ ಅಶೋಕ ಸ್ತಂಭದ ಸಿಂಹಗಳ ಚಿತ್ರವು ಕಾಣುತ್ತದೆ.

ಮತ್ತೊಂದು ಸಂದೇಶದಲ್ಲಿ ಕೊರೊನಾ ಕಾರಣಕ್ಕೆ ಆನ್‌ಲೈನ್ ತರಗತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದ್ದು ದೇಶಾದ್ಯಂತ ಎಲ್ಲಾ ಜನರಿಗೆ 5 ಲಕ್ಷ ಉಚಿತ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಮುಂದಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಾಟ್ಸಾಪ್‌ ಮತ್ತು  ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಆದರೆ, ಕೇಂದ್ರ ಸರ್ಕಾರ ನಿಜವಾಗಿಯೂ ಅಂತಹ ಯೋಜನೆಯನ್ನು ಘೋಷಿಸಿದೆಯೇ? ವೈರಲ್‌ ಸಂದೇಶದ ಸತ್ಯಾಸತ್ಯತೆ ಏನು ಎಂಬುವುದನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ ಅನ್ನು ಸರ್ಚ್‌ ಮಾಡಿ ವೈರಲ್ ಪೋಸ್ಟ್‌ನಲ್ಲಿ ಇರುವ ಯೋಜನೆಯನ್ನು ಕುರಿತು ಪರಿಶೀಲಿಸಿದಾಗ ಕೆಂದ್ರ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಜಾರಿ ಮಾಡಿದೆ ಎನ್ನುವ ಬಗ್ಗೆ ಯಾವ ಸುಳಿವು ಲಭ್ಯವಾಗಿಲ್ಲ.

ವಾಟ್ಸಾಪ್ ಸಂದೇಶದಲ್ಲಿ ಲಭ್ಯವಾಗಿರುವ ಲಿಂಕ್‌ಅನ್ನು ಪರಿಶೀಲಿಸಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿದಾಗ ಒಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರನ್ನು ದಾಖಲಿಸುವಂತೆ ಕೇಳುತ್ತದೆ. ಅದನ್ನು ದಾಖಲಿಸಿ ಮುಂದುವರೆದರೆ, “ಪರಿಶೀಲನೆಯ ನಂತರ, ಉಚಿತ ಲ್ಯಾಪ್‌ಟಾಪ್ ಪಡೆಯಲು ನೀವು ಅರ್ಹತೆ ಪಡೆದಿದ್ದೀರಿ” ಎಂದು ಹೇಳಿ ಕೆಳಗಿನ ಮೂರು ಷರತ್ತನ್ನು ಇಟ್ಟು, ಅದನ್ನು ಪೂರೈಸುವಂತೆ ಕೇಳತ್ತದೆ.

  1. WhatsApp ನಲ್ಲಿ 5 ಗುಂಪುಗಳು ಅಥವಾ 15 ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ (ಕೆಳಗಿನ “SHARE” ಐಕಾನ್ ಮೇಲೆ ಕ್ಲಿಕ್ ಮಾಡಿ).
  2. ಶೇರ್‌ ಮಾಡಿದಾಗ ಹಸಿರು ಬಾಕ್ಸ್‌ ಭರ್ತಿಯಾಗಿ ಶಿಕ್ಷಣ ಇಲಾಖೆ ಪುಟ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತದೆ.
  3. ಇದರ ದೃಢೀಕರಣವನ್ನು ನೀವು 15 ನಿಮಿಷಗಳಲ್ಲಿ SMS ಮೂಲಕ ಪಡೆಯುತ್ತೀರಿ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್

ಈ ಹಂತಗಳು ಮುಗಿದ ನಂತರ, ಅರ್ಜಿದಾರರ ವೈಯುಕ್ತಿಕ ವಿವರಗಳ್ನು ಕೇಳಲು ಪ್ರಾರಂಭಿಸುತ್ತದೆ.

ವಾಸ್ತವವಾಗಿ ಯಾವುದೇ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಿವರವನ್ನು ಕೇಳಲಾಗುತ್ತದೆ. ಆದರೆ ಯೋಜನೆ ಬಗ್ಗೆ ಇತರೆ 5 ವಾಟ್ಸಾಪ್ ಗುಂಪುಗಳಿಗೆ ಹಂಚಿಕೆ ಮಾಡಿ ಎಂದು ಕೇಳುವುದಿಲ್ಲ. ಹಸಿರು ಬಾಕ್ಸ್‌ ಭರ್ತಿ ಆದ ನಂತರ ಶಿಕ್ಷಣ ಇಲಾಖೆ ಪುಟ ಸ್ವಯಂ ಚಾಲಿತವಾಗಿ ತೆರೆದುಕೊಳ್ಳುತ್ತದೆ ಎಂಬ ನಿಯಮ ಇರುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗಲೇ ಇದು ಕೇಂದ್ರ ಸರ್ಕಾರದ ಯೋಜನೆ ಅಲ್ಲ ಎಂದು ಖಚಿತವಾಗುತ್ತದೆ.

ಅಷ್ಟೆ ಅಲ್ಲದೆ, ವೈರಲ್ ಸಂದೇಶದ ಬಗ್ಗೆ ತನಿಖೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ಉಚಿತ ಲ್ಯಾಪ್‌ಟಾಪ್  ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಆದರೆ ಇದು ನಕಲಿ ಎಂದು ಪಿಐಬಿ ಹೇಳಿದೆ.

ಇಷ್ಟೆ ಅಲ್ಲದೆ,️ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ ಎಂದು ಪಿಐಬಿ ಹೇಳಿದ್ದು, “ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಶೇರ್ ಮಾಡಬೇಡಿ ಹಾಗೂ️ ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ಹೇಳಿದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತಿದೆ ಎಂದು ಈ ಹಿಂದೆಯೂ ಇಂತಹದೇ ಪೋಸ್ಟ್‌  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದು ನಕಲಿ ಎಂದು ಏನ್‌ ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಅದನ್ನು ನಕಲಿ ಎಂದು ನಿರೂಪಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಅದನ್ನು ಓದುಗರು ಇಲ್ಲಿ ನೋಡಬಹುದು. ಈ ಜಾಹೀರಾತನ್ನು ನೀವು ಎಲ್ಲಾದರೂ ನೋಡಿದ್ದರೆ ಅಥವಾ ವಾಟ್ಸಾಪ್‌ನಲ್ಲಿ ನಿಮಗೆ ಬಂದಿದ್ದರೆ, ಅದನ್ನು ನಂಬಬೇಡಿ ಎಂದು ಪಿಐಬಿ ಎಚ್ಚರಿಸಿದೆ. ಅದರಲ್ಲಿ ನೀಡಿರುವ ಸಂಖ್ಯೆಗೆ ಯಾವುದೇ SMS ಕಳುಹಿಸಬೇಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ನೀವು ವಂಚನೆಗೆ ಬಲಿಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ವಂಚನೆಯ ಬಗ್ಗೆ ಇತರರಿಗೂ ಅರಿವು ಮೂಡಿಸಿ. ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು ನಮ್ಮ ವಾಟ್ಸಪ್‌ ನಂಬರ್‌‌ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...