Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ...

ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೇ?

- Advertisement -
- Advertisement -

“ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯವು ಉಚಿತ ಲ್ಯಾಪ್‌ಟಾಪ್‌ಗಳನ್ನು (Free Laptop) ವಿತರಿಸುತ್ತಿದ್ದು, ಅದಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ” ಎಂದು ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದೆ. ಈ ಸಂದೇಶದ ಜೊತೆಗೆ ಲಿಂಕ್‌ ಕೂಡಾ ಇದ್ದು, ಲಿಂಕ್‌ನಲ್ಲಿ, “ಭಾರತ ಸರ್ಕಾರ | ಶಿಕ್ಷಣ ಸಚಿವಾಲಯ” ಎಂಬ ಬರಹದೊಂದಿಗೆ ಲಾಷ್ಟ್ರ ಲಾಂಛನವಾದ ಅಶೋಕ ಸ್ತಂಭದ ಸಿಂಹಗಳ ಚಿತ್ರವು ಕಾಣುತ್ತದೆ.

ಮತ್ತೊಂದು ಸಂದೇಶದಲ್ಲಿ ಕೊರೊನಾ ಕಾರಣಕ್ಕೆ ಆನ್‌ಲೈನ್ ತರಗತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ರೂಪಿಸಿದ್ದು ದೇಶಾದ್ಯಂತ ಎಲ್ಲಾ ಜನರಿಗೆ 5 ಲಕ್ಷ ಉಚಿತ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಮುಂದಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಾಟ್ಸಾಪ್‌ ಮತ್ತು  ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಆದರೆ, ಕೇಂದ್ರ ಸರ್ಕಾರ ನಿಜವಾಗಿಯೂ ಅಂತಹ ಯೋಜನೆಯನ್ನು ಘೋಷಿಸಿದೆಯೇ? ವೈರಲ್‌ ಸಂದೇಶದ ಸತ್ಯಾಸತ್ಯತೆ ಏನು ಎಂಬುವುದನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವೆಬ್‌ಸೈಟ್‌ ಅನ್ನು ಸರ್ಚ್‌ ಮಾಡಿ ವೈರಲ್ ಪೋಸ್ಟ್‌ನಲ್ಲಿ ಇರುವ ಯೋಜನೆಯನ್ನು ಕುರಿತು ಪರಿಶೀಲಿಸಿದಾಗ ಕೆಂದ್ರ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಜಾರಿ ಮಾಡಿದೆ ಎನ್ನುವ ಬಗ್ಗೆ ಯಾವ ಸುಳಿವು ಲಭ್ಯವಾಗಿಲ್ಲ.

ವಾಟ್ಸಾಪ್ ಸಂದೇಶದಲ್ಲಿ ಲಭ್ಯವಾಗಿರುವ ಲಿಂಕ್‌ಅನ್ನು ಪರಿಶೀಲಿಸಲಾಗಿದ್ದು ಅದರ ಮೇಲೆ ಕ್ಲಿಕ್ ಮಾಡಿದಾಗ ಒಂದು ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ ನಿಮ್ಮ ಹೆಸರನ್ನು ದಾಖಲಿಸುವಂತೆ ಕೇಳುತ್ತದೆ. ಅದನ್ನು ದಾಖಲಿಸಿ ಮುಂದುವರೆದರೆ, “ಪರಿಶೀಲನೆಯ ನಂತರ, ಉಚಿತ ಲ್ಯಾಪ್‌ಟಾಪ್ ಪಡೆಯಲು ನೀವು ಅರ್ಹತೆ ಪಡೆದಿದ್ದೀರಿ” ಎಂದು ಹೇಳಿ ಕೆಳಗಿನ ಮೂರು ಷರತ್ತನ್ನು ಇಟ್ಟು, ಅದನ್ನು ಪೂರೈಸುವಂತೆ ಕೇಳತ್ತದೆ.

  1. WhatsApp ನಲ್ಲಿ 5 ಗುಂಪುಗಳು ಅಥವಾ 15 ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ (ಕೆಳಗಿನ “SHARE” ಐಕಾನ್ ಮೇಲೆ ಕ್ಲಿಕ್ ಮಾಡಿ).
  2. ಶೇರ್‌ ಮಾಡಿದಾಗ ಹಸಿರು ಬಾಕ್ಸ್‌ ಭರ್ತಿಯಾಗಿ ಶಿಕ್ಷಣ ಇಲಾಖೆ ಪುಟ ಸ್ವಯಂಚಾಲಿತವಾಗಿ ತೆರೆದುಕೊಳ್ಳುತ್ತದೆ.
  3. ಇದರ ದೃಢೀಕರಣವನ್ನು ನೀವು 15 ನಿಮಿಷಗಳಲ್ಲಿ SMS ಮೂಲಕ ಪಡೆಯುತ್ತೀರಿ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಚಂದ್ರು ಹತ್ಯೆ ಕುರಿತು ಸುಳ್ಳು ಹೇಳಿದ ಗೃಹ ಸಚಿವ; ಪ್ರಚಾರ ಮಾಡಿದ ಬಲಪಂಥೀಯ ಟ್ರೋಲ್ ಪೇಜ್

ಈ ಹಂತಗಳು ಮುಗಿದ ನಂತರ, ಅರ್ಜಿದಾರರ ವೈಯುಕ್ತಿಕ ವಿವರಗಳ್ನು ಕೇಳಲು ಪ್ರಾರಂಭಿಸುತ್ತದೆ.

ವಾಸ್ತವವಾಗಿ ಯಾವುದೇ ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಿವರವನ್ನು ಕೇಳಲಾಗುತ್ತದೆ. ಆದರೆ ಯೋಜನೆ ಬಗ್ಗೆ ಇತರೆ 5 ವಾಟ್ಸಾಪ್ ಗುಂಪುಗಳಿಗೆ ಹಂಚಿಕೆ ಮಾಡಿ ಎಂದು ಕೇಳುವುದಿಲ್ಲ. ಹಸಿರು ಬಾಕ್ಸ್‌ ಭರ್ತಿ ಆದ ನಂತರ ಶಿಕ್ಷಣ ಇಲಾಖೆ ಪುಟ ಸ್ವಯಂ ಚಾಲಿತವಾಗಿ ತೆರೆದುಕೊಳ್ಳುತ್ತದೆ ಎಂಬ ನಿಯಮ ಇರುವುದಿಲ್ಲ.

ಈ ಎಲ್ಲಾ ವಿಚಾರಗಳನ್ನು ಗಮನಿಸಿದಾಗಲೇ ಇದು ಕೇಂದ್ರ ಸರ್ಕಾರದ ಯೋಜನೆ ಅಲ್ಲ ಎಂದು ಖಚಿತವಾಗುತ್ತದೆ.

ಅಷ್ಟೆ ಅಲ್ಲದೆ, ವೈರಲ್ ಸಂದೇಶದ ಬಗ್ಗೆ ತನಿಖೆ ನಡೆಸಿದ ಪಿಐಬಿ ಫ್ಯಾಕ್ಟ್ ಚೆಕ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಮಾಹಿತಿಯನ್ನು ನೀಡಿದ್ದು, ಪ್ರಧಾನಿ ಉಚಿತ ಲ್ಯಾಪ್‌ಟಾಪ್  ವಿತರಣಾ ಯೋಜನೆಯಡಿ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದು ಸಂದೇಶದಲ್ಲಿ ಹೇಳಲಾಗುತ್ತಿದೆ. ಆದರೆ ಇದು ನಕಲಿ ಎಂದು ಪಿಐಬಿ ಹೇಳಿದೆ.

ಇಷ್ಟೆ ಅಲ್ಲದೆ,️ ಇಂತಹ ನಕಲಿ ಸಂದೇಶಗಳ ಬಗ್ಗೆ ಎಚ್ಚರದಿಂದಿರಿ ಎಂದು ಪಿಐಬಿ ಹೇಳಿದ್ದು, “ಇವುಗಳನ್ನು ಫಾರ್ವರ್ಡ್ ಮಾಡಬೇಡಿ/ಶೇರ್ ಮಾಡಬೇಡಿ ಹಾಗೂ️ ಅಂತಹ ಲಿಂಕ್‌ಗಳು ಮತ್ತು ವೆಬ್‌ಸೈಟ್‌ಗಳಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬೇಡಿ” ಎಂದು ಹೇಳಿದೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್ ಫೋನ್ ನೀಡುತ್ತಿದೆ ಎಂದು ಈ ಹಿಂದೆಯೂ ಇಂತಹದೇ ಪೋಸ್ಟ್‌  ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದು ನಕಲಿ ಎಂದು ಏನ್‌ ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಅದನ್ನು ನಕಲಿ ಎಂದು ನಿರೂಪಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಅದನ್ನು ಓದುಗರು ಇಲ್ಲಿ ನೋಡಬಹುದು. ಈ ಜಾಹೀರಾತನ್ನು ನೀವು ಎಲ್ಲಾದರೂ ನೋಡಿದ್ದರೆ ಅಥವಾ ವಾಟ್ಸಾಪ್‌ನಲ್ಲಿ ನಿಮಗೆ ಬಂದಿದ್ದರೆ, ಅದನ್ನು ನಂಬಬೇಡಿ ಎಂದು ಪಿಐಬಿ ಎಚ್ಚರಿಸಿದೆ. ಅದರಲ್ಲಿ ನೀಡಿರುವ ಸಂಖ್ಯೆಗೆ ಯಾವುದೇ SMS ಕಳುಹಿಸಬೇಡಿ ಮತ್ತು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ನೀವು ವಂಚನೆಗೆ ಬಲಿಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಈ ವಂಚನೆಯ ಬಗ್ಗೆ ಇತರರಿಗೂ ಅರಿವು ಮೂಡಿಸಿ. ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು ನಮ್ಮ ವಾಟ್ಸಪ್‌ ನಂಬರ್‌‌ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....