Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ...

ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಡಿಯೋದ ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ. ಆದರೆ ವಿಡಿಯೋವನ್ನು ತಿರುಚಲಾಗಿದೆ.

- Advertisement -
- Advertisement -

ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಫೆಬ್ರವರಿ 26, 2019 ರಂದು ಭಾರತ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 300 ಜನ ಪಾಕಿಸ್ತಾನಿಗಳು ಸಾವನ್ನಪ್ಪಿದ್ದರು ಎಂಬುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಹತ್ತಾರು ಭಾರತೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಇದನ್ನು ಖಚಿತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಸರ್ಕಾರಿ ಮೂಲಗಳ ಆಧಾರದಲ್ಲಿ ಈ ವರದಿಯನ್ನು ಮಾಡಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ಹೇಳಿಕೊಂಡಿದ್ದವು. ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, “ಇಂತಹ ಅಪಘಾತದ ಅಂಕಿಅಂಶಗಳನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದ್ದರು.

ಈ ಸುದ್ದಿಯನ್ನು ಎಎನ್‌ಐ, ರಿಪಬ್ಲಿಕ್ ಟಿವಿ, ದಿ ಟೈಮ್ಸ್ ಆಫ್ ಇಂಡಿಯಾ, ಮನಿಕಂಟ್ರೋಲ್, ಡಬ್ಲ್ಯುಐಒಎನ್, ಹಿಂದೂಸ್ತಾನ್ ಟೈಮ್ಸ್, ಎನ್ಇ ನೌ, ಒಡಿಶಾ ಟಿವಿ, ಜಾಗ್ರಣ್, ಸ್ವರಾಜ್ಯ, ಲೋಕ್‌ಮತ್, ಒನ್‌ಇಂಡಿಯಾ, ಡೆಕ್ಕನ್ ಹೆರಾಲ್ಡ್, ಬ್ಯುಸಿನೆಸ್ ಟುಡೆ, ಲೈವ್‌ಮಿಂಟ್, ಡಿಎನ್‌ಎ, ದಿ ಕ್ವಿಂಟ್, ನ್ಯೂಸ್ 18 ಇಂಡಿಯಾ, ಎಚ್‌ಡಬ್ಲ್ಯೂ ನ್ಯೂಸ್, ಇಂಡಿಯಾ ಟುಡೆ, ಸಿಎನ್‌ಬಿಸಿ ಟಿವಿ 18, ಎಬಿಪಿ ನ್ಯೂಸ್, ಎನ್‌ಡಿಟಿವಿ, ಇಂಡಿಯಾ ಟಿವಿ ಸೇರಿದಂತೆ ಕನ್ನಡದ ವಿಜಯವಾಣಿ ಮತ್ತು ಪ್ರಜಾವಾಣಿ, ಸುವರ್ಣ ನ್ಯೂಸ್, ಟಿವಿ-9 ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದೆ. ಈ ವರದಿಗಳಲ್ಲಿ ಹಲವು ಮಧ್ಯಮಗಳು ಎಎನ್‌ಐ ಸುದ್ದಿಯನ್ನು ಉಲ್ಲೇಖಿಸಿ ವರದಿ ಮಾಡಿವೆ.

“ಬಾಲಾಕೋಟ್ ಏರ್‌ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಪಾಕ್ ನೀಡಿದೆ ಸ್ಫೋಟಕ ಮಾಹಿತಿ” ಎಂದು ವಿಜಯವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಫ್ಯಾಕ್ಟ್‌ಚೆಕ್:

ಟಿವಿಯೊಂದರ ಚರ್ಚೆಯಲ್ಲಿ ಹಿಲಾಲಿ, “ಭಾರತವು ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಯುದ್ಧ ಮಾಡಿತು. ಇದರಲ್ಲಿ ಕನಿಷ್ಠ 300 ಮಂದಿ ಸತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಆದರೆ ನಮ್ಮ ಗುರಿ ಅವರಿಗಿಂತ ಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ ಅನ್ನು ಗುರಿಯಾಗಿಸಿಕೊಂಡಿದ್ದೆವು. ಅದು ನಮ್ಮ ಕಾನೂನುಬದ್ಧ ಗುರಿಯಾಗಿತ್ತು. ಏಕೆಂದರೆ ಅವರು ಮಿಲಿಟರಿಯ ಅಧಿಕಾರಿಯಾಗಿದ್ದರು. ಸರ್ಜಿಕಲ್ ಸ್ಟ್ರೈಕ್ ಒಂದು ಸೀಮಿತ ಕ್ರಮ. ಇದು ಯಾವುದೇ ಅಪಘಾತಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಸಬ್‌ಕಾನ್ಷಿಯಸ್ ಆಗಿ ಒಪ್ಪಿಕೊಂಡಿದ್ದೇವೆ. ಈಗ ನಾವು ಅದೇ ಸಬ್‌ಕಾನ್ಷಿಯಸ್‌ನಿಂದ ಅವರಿಗೆ ಹೇಳುತ್ತಿದ್ದೇವೆ, ಅವರು ಏನು ಮಾಡುತ್ತಾರೋ ನಾವು ಅದನ್ನು ಮಾತ್ರ ಮಾಡುತ್ತೇವೆ. ಇದು ಉಲ್ಬಣಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಭಾರತೀಯ ಮಾಧ್ಯಮಗಳು ಉಲ್ಲೇಖಿಸಿದ ವೀಡಿಯೋ;

ಯೂಟ್ಯೂಬ್‌ನಲ್ಲಿ ಈ ಚರ್ಚೆಯನ್ನು ಹುಡುಕಿದಾಗ, ಈ ವೀಡಿಯೋವನ್ನು “ಅಜೆಂಡಾ ಪಾಕಿಸ್ತಾನ” ಎಂಬ ಕಾರ್ಯಕ್ರಮದ ಭಾಗವಾಗಿ HUM ಸುದ್ದಿ ಮಾಧ್ಯಮದಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. ಇಲ್ಲಿನ ಚರ್ಚೆಯ ವಿಷಯವೇನೆಂದರೆ, “ಶತ್ರುಗಳ ಶಬ್ದಕೋಶವನ್ನು ಬಳಸುವುದರ ಮೂಲಕ (ಈ ಸಂದರ್ಭದಲ್ಲಿ ಸರ್ಜಿಕಲ್ ಸ್ಟ್ರೈಕ್ ) ಪಾಕಿಸ್ತಾನ ತನ್ನದೇ ಆದ ಪ್ರಕರಣವನ್ನು ದುರ್ಬಲಗೊಳಿಸುತ್ತಿದೆಯೇ?” ಎನ್ನುವುದು. ಜಾಫರ್ ಹಿಲಾಲಿ ಈ ಪ್ರಶ್ನೆಗೆ ಸುಮಾರು 4:17 ನೇ ನಿಮಿಷದಲ್ಲಿ ಉತ್ತರಿಸಲು ಪ್ರಾರಂಭಿಸುತ್ತಾರೆ. ಸುಮಾರು 5:14 ನೇ ನಿಮಿಷದಲ್ಲಿ, “ಭಾರತ, ನೀವು ಏನು ಮಾಡಿದ್ದೀರಿ? ಇದು ಯುದ್ಧ. ಅಂತರರಾಷ್ಟ್ರೀಯ ಗಡಿಯನ್ನು ದಾಟುವ ಮೂಲಕ ಭಾರತವು ಕನಿಷ್ಠ 300 ಜನರನ್ನು ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

ಮುಂದಿನ ವಾಕ್ಯದಲ್ಲಿ 5:29 ನೇ ನಿಮಿಷದಲ್ಲಿ ಜಾಫರ್ ಹಿಲಾಲಿ ಭಾರತೀಯ ಕಾರ್ಯಾಚರಣೆ ವಿಫಲವಾಗಿದೆ ಎಂದು ಹೇಳುತ್ತಾರೆ. “ಕಾಕತಾಳೀಯವೆಂಬಂತೆ ಅವರು ಸಾಯಲಿಲ್ಲ (ಪಾಕಿಸ್ತಾನಿ ಜನರು). ಆದರೆ ಭಾರತವು ಫುಟ್ಬಾಲ್ ಮೈದಾನಕ್ಕೆ ಬಾಂಬ್ ಸ್ಫೋಟಿಸಿತು” ಎಂದು ಹೇಳಿದ್ದಾರೆ.

ವಾಸ್ತವದಲ್ಲಿ, ಈ ಭಾಗದ ವೀಡಿಯೋ ವೈರಲ್ ಆಗುವ ಮೊದಲು ಪಾಕಿಸ್ತಾನದ 300 ಜನರನ್ನು ಕೊಲ್ಲುವ ಭಾರತದ ಉದ್ದೇಶದ ಬಗ್ಗೆ ಹಿಲಾಲಿ ಮಾತನಾಡುತ್ತಿದ್ದರು.

ಸುಮಾರು 4:30 ನೇ ನಿಮಿಷಗಳಲ್ಲಿ ಅವರು ಹೀಗೆ ಹೇಳುತ್ತಾರೆ, “300 ಮಕ್ಕಳು ಅಧ್ಯಯನ ಮಾಡುತ್ತಿರುವ ಮದರಸಾದಲ್ಲಿ ದಾಳಿ ಮಾಡುವುದು ನಿಮ್ಮ ಉದ್ದೇಶವಾಗಿತ್ತು ಎಂದು ಹೇಳಲಾಗುತ್ತದೆ. ಇದರರ್ಥ 300 ಜನರನ್ನು ಕೊಲ್ಲುವುದು ನಿಮ್ಮ ಉದ್ದೇಶವಾಗಿತ್ತು ಎಂಬುದು. ಆದರೆ ಅವರು ಅಲ್ಲಿ ಇರಲಿಲ್ಲ. ಭಾರತಕ್ಕೆ ಸಿಕ್ಕಿದ ಮಾಹಿತಿ ತಪ್ಪಾಗಿದೆ. ಹಾಗಾಗಿ ಅದು ಸರ್ಜಿಕಲ್ ಸ್ಟ್ರೈಕ್ ಆಗಲಿಲ್ಲ. ನಿಮ್ಮ ಬಾಂಬ್ ಅನ್ನು ಫುಟ್ಬಾಲ್ ಮೈದಾನದಲ್ಲಿ ಎಸೆದಿದ್ದೀರಿ” ಎಂದು ಹೇಳಿದ್ದಾರೆ.

ಹಾಗಾಗಿ ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ ಎಂಬುದು ವಿಡಿಯೋದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಪ್ರತಿಪಾದನೆಯ ಮೂಲ:

ಯಾವುದೇ ಮಾಧ್ಯಮ ಸಂಸ್ಥೆಗಳು ತಮ್ಮ ವರದಿಗಳಲ್ಲಿ ಮೂಲ ವೀಡಿಯೊವನ್ನು ಉಲ್ಲೇಖಿಸಿಲ್ಲ. ಆದರೆ ರಿಪಬ್ಲಿಕ್ ಮತ್ತು ಎನ್ಇ ನೌ ಟ್ವಿಟರ್ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊವನ್ನು ಎಂಬೆಡ್ ಮಾಡಿದೆ. ನಾವು ಮೂಲ ವೀಡಿಯೊವನ್ನು ರಿಪಬ್ಲಿಕ್ ಎಂಬೆಡ್ ಮಾಡಿದ ವೀಡಿಯೊದೊಂದಿಗೆ ಹೋಲಿಸಿದರೆ, 7 ರಿಂದ 9 ನೇ ಸೆಕೆಂಡುಗಳಲ್ಲಿ ಎಡಿಟ್ ಮಾಡಿರುವುದು ಕಂಡುಬರುತ್ತದೆ. “ಮರ್ನಾ (ಕೊಲ್ಲಲು)” ಎಂಬ ಪದವು “ಮಾರ (ಕೊಲ್ಲಲ್ಪಟ್ಟರು)” ಎಂದು ಹಿಲಾಲಿ ಹೇಳಿದಂತೆ ಭಾಸವಾಗುತ್ತದೆ. ‘ಎನ್’ ಉಚ್ಚಾರಣೆಯನ್ನು ಎಡಿಟ್ ಮಾಡಲಾಗಿದೆ.

 

ಮೇಲಿನ ಪ್ರತಿಪಾದನೆಯ ನಂತರ ಅವರ ಹೇಳಿಕೆಯನ್ನು ವೈರಲ್ ಕ್ಲಿಪ್‌ನಲ್ಲಿ ತೆಗೆದುಹಾಕಲಾಗಿದೆ. ಭಾರತದ ಕಾರ್ಯಾಚರಣೆ ವಿಫಲವಾಗಿದೆ ಮತ್ತು ವಾಯುಪಡೆಯು ಫುಟ್ಬಾಲ್ ಮೈದಾನದ ಮೇಲೆ ಬಾಂಬ್ ಸ್ಫೋಟಿಸಿತು ಎಂದು ಹಿಲಾಲಿ ಹೇಳುತ್ತಾರೆ.

ಇದಲ್ಲದೆ, ವೈರಲ್ ವೀಡಿಯೊವನ್ನು ತಲೆಕೆಳಗಾಗಿ ಮತ್ತು ಸ್ಕ್ರೀನ್-ರೆಕಾರ್ಡ್ ಮಾಡಲಾಗಿದೆ. ಮೂಲ ವೀಡಿಯೊ ಬಾಲಕೋಟ್‌ನ ಹಾನಿಗೊಳಗಾದ ಮರಗಳನ್ನು ತೋರಿಸುತ್ತದೆ ಮತ್ತು ತಿರುಚಿರುವ ವೀಡಿಯೊ ಮಿಲಿಟರಿ ಕ್ಯಾಂಪ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೋರಿಸುತ್ತದೆ. ತಿರುಚಿದ ವೀಡಿಯೊವು ಫಲಕದಲ್ಲಿರುವ ಜನರ ಹೆಸರನ್ನು ಸಹ ಒಳಗೊಂಡಿರುವುದಿಲ್ಲ ಮತ್ತು ಮೂಲ ವೀಡಿಯೊದಲ್ಲಿನ ಬಿಳಿ ಬಾರ್ಡರ್ ಇದೆ. ಆದರೆ ತಿರುಚಿದ ವೀಡಿಯೋದಲ್ಲಿ ಬಾರ್ಡರ್ ಗುಲಾಬಿ ಬಣ್ಣದ್ದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ತನ್ನ ಹೇಳಿಕೆಯನ್ನು ಎಡಿಟ್ ಮಾಡಲಾಗಿದೆ ಎಂದು ಸ್ವತಃ ಜಾಫರ್ ಹಿಲಾಲಿ ದೃಢಪಡಿಸಿದ್ದಾರೆ.

ಭಾರತದ ವೈಮಾನಿಕ ದಾಳಿಯು ಬಾಲಕೋಟ್‌ನಲ್ಲಿ 300 ಜನರನ್ನು ಕೊಂದಿದೆ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಒಪ್ಪಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುಳ್ಳು ವರದಿ ಮಾಡಿವೆ. ಆದರೆ ಈ ವರದಿಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾದ ತಿರುಚಿದ ವೀಡಿಯೋಗಳನ್ನು ಬಳಸಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...