Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ...

ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಡಿಯೋದ ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ. ಆದರೆ ವಿಡಿಯೋವನ್ನು ತಿರುಚಲಾಗಿದೆ.

- Advertisement -
- Advertisement -

ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಫೆಬ್ರವರಿ 26, 2019 ರಂದು ಭಾರತ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 300 ಜನ ಪಾಕಿಸ್ತಾನಿಗಳು ಸಾವನ್ನಪ್ಪಿದ್ದರು ಎಂಬುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಹತ್ತಾರು ಭಾರತೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಇದನ್ನು ಖಚಿತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಸರ್ಕಾರಿ ಮೂಲಗಳ ಆಧಾರದಲ್ಲಿ ಈ ವರದಿಯನ್ನು ಮಾಡಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ಹೇಳಿಕೊಂಡಿದ್ದವು. ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, “ಇಂತಹ ಅಪಘಾತದ ಅಂಕಿಅಂಶಗಳನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದ್ದರು.

ಈ ಸುದ್ದಿಯನ್ನು ಎಎನ್‌ಐ, ರಿಪಬ್ಲಿಕ್ ಟಿವಿ, ದಿ ಟೈಮ್ಸ್ ಆಫ್ ಇಂಡಿಯಾ, ಮನಿಕಂಟ್ರೋಲ್, ಡಬ್ಲ್ಯುಐಒಎನ್, ಹಿಂದೂಸ್ತಾನ್ ಟೈಮ್ಸ್, ಎನ್ಇ ನೌ, ಒಡಿಶಾ ಟಿವಿ, ಜಾಗ್ರಣ್, ಸ್ವರಾಜ್ಯ, ಲೋಕ್‌ಮತ್, ಒನ್‌ಇಂಡಿಯಾ, ಡೆಕ್ಕನ್ ಹೆರಾಲ್ಡ್, ಬ್ಯುಸಿನೆಸ್ ಟುಡೆ, ಲೈವ್‌ಮಿಂಟ್, ಡಿಎನ್‌ಎ, ದಿ ಕ್ವಿಂಟ್, ನ್ಯೂಸ್ 18 ಇಂಡಿಯಾ, ಎಚ್‌ಡಬ್ಲ್ಯೂ ನ್ಯೂಸ್, ಇಂಡಿಯಾ ಟುಡೆ, ಸಿಎನ್‌ಬಿಸಿ ಟಿವಿ 18, ಎಬಿಪಿ ನ್ಯೂಸ್, ಎನ್‌ಡಿಟಿವಿ, ಇಂಡಿಯಾ ಟಿವಿ ಸೇರಿದಂತೆ ಕನ್ನಡದ ವಿಜಯವಾಣಿ ಮತ್ತು ಪ್ರಜಾವಾಣಿ, ಸುವರ್ಣ ನ್ಯೂಸ್, ಟಿವಿ-9 ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದೆ. ಈ ವರದಿಗಳಲ್ಲಿ ಹಲವು ಮಧ್ಯಮಗಳು ಎಎನ್‌ಐ ಸುದ್ದಿಯನ್ನು ಉಲ್ಲೇಖಿಸಿ ವರದಿ ಮಾಡಿವೆ.

“ಬಾಲಾಕೋಟ್ ಏರ್‌ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಪಾಕ್ ನೀಡಿದೆ ಸ್ಫೋಟಕ ಮಾಹಿತಿ” ಎಂದು ವಿಜಯವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಫ್ಯಾಕ್ಟ್‌ಚೆಕ್:

ಟಿವಿಯೊಂದರ ಚರ್ಚೆಯಲ್ಲಿ ಹಿಲಾಲಿ, “ಭಾರತವು ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಯುದ್ಧ ಮಾಡಿತು. ಇದರಲ್ಲಿ ಕನಿಷ್ಠ 300 ಮಂದಿ ಸತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಆದರೆ ನಮ್ಮ ಗುರಿ ಅವರಿಗಿಂತ ಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ ಅನ್ನು ಗುರಿಯಾಗಿಸಿಕೊಂಡಿದ್ದೆವು. ಅದು ನಮ್ಮ ಕಾನೂನುಬದ್ಧ ಗುರಿಯಾಗಿತ್ತು. ಏಕೆಂದರೆ ಅವರು ಮಿಲಿಟರಿಯ ಅಧಿಕಾರಿಯಾಗಿದ್ದರು. ಸರ್ಜಿಕಲ್ ಸ್ಟ್ರೈಕ್ ಒಂದು ಸೀಮಿತ ಕ್ರಮ. ಇದು ಯಾವುದೇ ಅಪಘಾತಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಸಬ್‌ಕಾನ್ಷಿಯಸ್ ಆಗಿ ಒಪ್ಪಿಕೊಂಡಿದ್ದೇವೆ. ಈಗ ನಾವು ಅದೇ ಸಬ್‌ಕಾನ್ಷಿಯಸ್‌ನಿಂದ ಅವರಿಗೆ ಹೇಳುತ್ತಿದ್ದೇವೆ, ಅವರು ಏನು ಮಾಡುತ್ತಾರೋ ನಾವು ಅದನ್ನು ಮಾತ್ರ ಮಾಡುತ್ತೇವೆ. ಇದು ಉಲ್ಬಣಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಭಾರತೀಯ ಮಾಧ್ಯಮಗಳು ಉಲ್ಲೇಖಿಸಿದ ವೀಡಿಯೋ;

ಯೂಟ್ಯೂಬ್‌ನಲ್ಲಿ ಈ ಚರ್ಚೆಯನ್ನು ಹುಡುಕಿದಾಗ, ಈ ವೀಡಿಯೋವನ್ನು “ಅಜೆಂಡಾ ಪಾಕಿಸ್ತಾನ” ಎಂಬ ಕಾರ್ಯಕ್ರಮದ ಭಾಗವಾಗಿ HUM ಸುದ್ದಿ ಮಾಧ್ಯಮದಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. ಇಲ್ಲಿನ ಚರ್ಚೆಯ ವಿಷಯವೇನೆಂದರೆ, “ಶತ್ರುಗಳ ಶಬ್ದಕೋಶವನ್ನು ಬಳಸುವುದರ ಮೂಲಕ (ಈ ಸಂದರ್ಭದಲ್ಲಿ ಸರ್ಜಿಕಲ್ ಸ್ಟ್ರೈಕ್ ) ಪಾಕಿಸ್ತಾನ ತನ್ನದೇ ಆದ ಪ್ರಕರಣವನ್ನು ದುರ್ಬಲಗೊಳಿಸುತ್ತಿದೆಯೇ?” ಎನ್ನುವುದು. ಜಾಫರ್ ಹಿಲಾಲಿ ಈ ಪ್ರಶ್ನೆಗೆ ಸುಮಾರು 4:17 ನೇ ನಿಮಿಷದಲ್ಲಿ ಉತ್ತರಿಸಲು ಪ್ರಾರಂಭಿಸುತ್ತಾರೆ. ಸುಮಾರು 5:14 ನೇ ನಿಮಿಷದಲ್ಲಿ, “ಭಾರತ, ನೀವು ಏನು ಮಾಡಿದ್ದೀರಿ? ಇದು ಯುದ್ಧ. ಅಂತರರಾಷ್ಟ್ರೀಯ ಗಡಿಯನ್ನು ದಾಟುವ ಮೂಲಕ ಭಾರತವು ಕನಿಷ್ಠ 300 ಜನರನ್ನು ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

ಮುಂದಿನ ವಾಕ್ಯದಲ್ಲಿ 5:29 ನೇ ನಿಮಿಷದಲ್ಲಿ ಜಾಫರ್ ಹಿಲಾಲಿ ಭಾರತೀಯ ಕಾರ್ಯಾಚರಣೆ ವಿಫಲವಾಗಿದೆ ಎಂದು ಹೇಳುತ್ತಾರೆ. “ಕಾಕತಾಳೀಯವೆಂಬಂತೆ ಅವರು ಸಾಯಲಿಲ್ಲ (ಪಾಕಿಸ್ತಾನಿ ಜನರು). ಆದರೆ ಭಾರತವು ಫುಟ್ಬಾಲ್ ಮೈದಾನಕ್ಕೆ ಬಾಂಬ್ ಸ್ಫೋಟಿಸಿತು” ಎಂದು ಹೇಳಿದ್ದಾರೆ.

ವಾಸ್ತವದಲ್ಲಿ, ಈ ಭಾಗದ ವೀಡಿಯೋ ವೈರಲ್ ಆಗುವ ಮೊದಲು ಪಾಕಿಸ್ತಾನದ 300 ಜನರನ್ನು ಕೊಲ್ಲುವ ಭಾರತದ ಉದ್ದೇಶದ ಬಗ್ಗೆ ಹಿಲಾಲಿ ಮಾತನಾಡುತ್ತಿದ್ದರು.

ಸುಮಾರು 4:30 ನೇ ನಿಮಿಷಗಳಲ್ಲಿ ಅವರು ಹೀಗೆ ಹೇಳುತ್ತಾರೆ, “300 ಮಕ್ಕಳು ಅಧ್ಯಯನ ಮಾಡುತ್ತಿರುವ ಮದರಸಾದಲ್ಲಿ ದಾಳಿ ಮಾಡುವುದು ನಿಮ್ಮ ಉದ್ದೇಶವಾಗಿತ್ತು ಎಂದು ಹೇಳಲಾಗುತ್ತದೆ. ಇದರರ್ಥ 300 ಜನರನ್ನು ಕೊಲ್ಲುವುದು ನಿಮ್ಮ ಉದ್ದೇಶವಾಗಿತ್ತು ಎಂಬುದು. ಆದರೆ ಅವರು ಅಲ್ಲಿ ಇರಲಿಲ್ಲ. ಭಾರತಕ್ಕೆ ಸಿಕ್ಕಿದ ಮಾಹಿತಿ ತಪ್ಪಾಗಿದೆ. ಹಾಗಾಗಿ ಅದು ಸರ್ಜಿಕಲ್ ಸ್ಟ್ರೈಕ್ ಆಗಲಿಲ್ಲ. ನಿಮ್ಮ ಬಾಂಬ್ ಅನ್ನು ಫುಟ್ಬಾಲ್ ಮೈದಾನದಲ್ಲಿ ಎಸೆದಿದ್ದೀರಿ” ಎಂದು ಹೇಳಿದ್ದಾರೆ.

ಹಾಗಾಗಿ ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ ಎಂಬುದು ವಿಡಿಯೋದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಪ್ರತಿಪಾದನೆಯ ಮೂಲ:

ಯಾವುದೇ ಮಾಧ್ಯಮ ಸಂಸ್ಥೆಗಳು ತಮ್ಮ ವರದಿಗಳಲ್ಲಿ ಮೂಲ ವೀಡಿಯೊವನ್ನು ಉಲ್ಲೇಖಿಸಿಲ್ಲ. ಆದರೆ ರಿಪಬ್ಲಿಕ್ ಮತ್ತು ಎನ್ಇ ನೌ ಟ್ವಿಟರ್ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊವನ್ನು ಎಂಬೆಡ್ ಮಾಡಿದೆ. ನಾವು ಮೂಲ ವೀಡಿಯೊವನ್ನು ರಿಪಬ್ಲಿಕ್ ಎಂಬೆಡ್ ಮಾಡಿದ ವೀಡಿಯೊದೊಂದಿಗೆ ಹೋಲಿಸಿದರೆ, 7 ರಿಂದ 9 ನೇ ಸೆಕೆಂಡುಗಳಲ್ಲಿ ಎಡಿಟ್ ಮಾಡಿರುವುದು ಕಂಡುಬರುತ್ತದೆ. “ಮರ್ನಾ (ಕೊಲ್ಲಲು)” ಎಂಬ ಪದವು “ಮಾರ (ಕೊಲ್ಲಲ್ಪಟ್ಟರು)” ಎಂದು ಹಿಲಾಲಿ ಹೇಳಿದಂತೆ ಭಾಸವಾಗುತ್ತದೆ. ‘ಎನ್’ ಉಚ್ಚಾರಣೆಯನ್ನು ಎಡಿಟ್ ಮಾಡಲಾಗಿದೆ.

 

ಮೇಲಿನ ಪ್ರತಿಪಾದನೆಯ ನಂತರ ಅವರ ಹೇಳಿಕೆಯನ್ನು ವೈರಲ್ ಕ್ಲಿಪ್‌ನಲ್ಲಿ ತೆಗೆದುಹಾಕಲಾಗಿದೆ. ಭಾರತದ ಕಾರ್ಯಾಚರಣೆ ವಿಫಲವಾಗಿದೆ ಮತ್ತು ವಾಯುಪಡೆಯು ಫುಟ್ಬಾಲ್ ಮೈದಾನದ ಮೇಲೆ ಬಾಂಬ್ ಸ್ಫೋಟಿಸಿತು ಎಂದು ಹಿಲಾಲಿ ಹೇಳುತ್ತಾರೆ.

ಇದಲ್ಲದೆ, ವೈರಲ್ ವೀಡಿಯೊವನ್ನು ತಲೆಕೆಳಗಾಗಿ ಮತ್ತು ಸ್ಕ್ರೀನ್-ರೆಕಾರ್ಡ್ ಮಾಡಲಾಗಿದೆ. ಮೂಲ ವೀಡಿಯೊ ಬಾಲಕೋಟ್‌ನ ಹಾನಿಗೊಳಗಾದ ಮರಗಳನ್ನು ತೋರಿಸುತ್ತದೆ ಮತ್ತು ತಿರುಚಿರುವ ವೀಡಿಯೊ ಮಿಲಿಟರಿ ಕ್ಯಾಂಪ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೋರಿಸುತ್ತದೆ. ತಿರುಚಿದ ವೀಡಿಯೊವು ಫಲಕದಲ್ಲಿರುವ ಜನರ ಹೆಸರನ್ನು ಸಹ ಒಳಗೊಂಡಿರುವುದಿಲ್ಲ ಮತ್ತು ಮೂಲ ವೀಡಿಯೊದಲ್ಲಿನ ಬಿಳಿ ಬಾರ್ಡರ್ ಇದೆ. ಆದರೆ ತಿರುಚಿದ ವೀಡಿಯೋದಲ್ಲಿ ಬಾರ್ಡರ್ ಗುಲಾಬಿ ಬಣ್ಣದ್ದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ತನ್ನ ಹೇಳಿಕೆಯನ್ನು ಎಡಿಟ್ ಮಾಡಲಾಗಿದೆ ಎಂದು ಸ್ವತಃ ಜಾಫರ್ ಹಿಲಾಲಿ ದೃಢಪಡಿಸಿದ್ದಾರೆ.

ಭಾರತದ ವೈಮಾನಿಕ ದಾಳಿಯು ಬಾಲಕೋಟ್‌ನಲ್ಲಿ 300 ಜನರನ್ನು ಕೊಂದಿದೆ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಒಪ್ಪಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುಳ್ಳು ವರದಿ ಮಾಡಿವೆ. ಆದರೆ ಈ ವರದಿಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾದ ತಿರುಚಿದ ವೀಡಿಯೋಗಳನ್ನು ಬಳಸಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...