Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ...

ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಡಿಯೋದ ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ. ಆದರೆ ವಿಡಿಯೋವನ್ನು ತಿರುಚಲಾಗಿದೆ.

- Advertisement -
- Advertisement -

ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಫೆಬ್ರವರಿ 26, 2019 ರಂದು ಭಾರತ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 300 ಜನ ಪಾಕಿಸ್ತಾನಿಗಳು ಸಾವನ್ನಪ್ಪಿದ್ದರು ಎಂಬುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ ಎಂದು ಹತ್ತಾರು ಭಾರತೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಇದನ್ನು ಖಚಿತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಸರ್ಕಾರಿ ಮೂಲಗಳ ಆಧಾರದಲ್ಲಿ ಈ ವರದಿಯನ್ನು ಮಾಡಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ಹೇಳಿಕೊಂಡಿದ್ದವು. ಆದರೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, “ಇಂತಹ ಅಪಘಾತದ ಅಂಕಿಅಂಶಗಳನ್ನು ಬಹಿರಂಗಗೊಳಿಸುವುದಿಲ್ಲ” ಎಂದು ಹೇಳಿದ್ದರು.

ಈ ಸುದ್ದಿಯನ್ನು ಎಎನ್‌ಐ, ರಿಪಬ್ಲಿಕ್ ಟಿವಿ, ದಿ ಟೈಮ್ಸ್ ಆಫ್ ಇಂಡಿಯಾ, ಮನಿಕಂಟ್ರೋಲ್, ಡಬ್ಲ್ಯುಐಒಎನ್, ಹಿಂದೂಸ್ತಾನ್ ಟೈಮ್ಸ್, ಎನ್ಇ ನೌ, ಒಡಿಶಾ ಟಿವಿ, ಜಾಗ್ರಣ್, ಸ್ವರಾಜ್ಯ, ಲೋಕ್‌ಮತ್, ಒನ್‌ಇಂಡಿಯಾ, ಡೆಕ್ಕನ್ ಹೆರಾಲ್ಡ್, ಬ್ಯುಸಿನೆಸ್ ಟುಡೆ, ಲೈವ್‌ಮಿಂಟ್, ಡಿಎನ್‌ಎ, ದಿ ಕ್ವಿಂಟ್, ನ್ಯೂಸ್ 18 ಇಂಡಿಯಾ, ಎಚ್‌ಡಬ್ಲ್ಯೂ ನ್ಯೂಸ್, ಇಂಡಿಯಾ ಟುಡೆ, ಸಿಎನ್‌ಬಿಸಿ ಟಿವಿ 18, ಎಬಿಪಿ ನ್ಯೂಸ್, ಎನ್‌ಡಿಟಿವಿ, ಇಂಡಿಯಾ ಟಿವಿ ಸೇರಿದಂತೆ ಕನ್ನಡದ ವಿಜಯವಾಣಿ ಮತ್ತು ಪ್ರಜಾವಾಣಿ, ಸುವರ್ಣ ನ್ಯೂಸ್, ಟಿವಿ-9 ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿದೆ. ಈ ವರದಿಗಳಲ್ಲಿ ಹಲವು ಮಧ್ಯಮಗಳು ಎಎನ್‌ಐ ಸುದ್ದಿಯನ್ನು ಉಲ್ಲೇಖಿಸಿ ವರದಿ ಮಾಡಿವೆ.

“ಬಾಲಾಕೋಟ್ ಏರ್‌ಸ್ಟ್ರೈಕ್ ಸಾಕ್ಷಿ ಕೇಳಿದವರಿಗೆ ಪಾಕ್ ನೀಡಿದೆ ಸ್ಫೋಟಕ ಮಾಹಿತಿ” ಎಂದು ವಿಜಯವಾಣಿ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಫ್ಯಾಕ್ಟ್‌ಚೆಕ್:

ಟಿವಿಯೊಂದರ ಚರ್ಚೆಯಲ್ಲಿ ಹಿಲಾಲಿ, “ಭಾರತವು ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಯುದ್ಧ ಮಾಡಿತು. ಇದರಲ್ಲಿ ಕನಿಷ್ಠ 300 ಮಂದಿ ಸತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಆದರೆ ನಮ್ಮ ಗುರಿ ಅವರಿಗಿಂತ ಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ ಅನ್ನು ಗುರಿಯಾಗಿಸಿಕೊಂಡಿದ್ದೆವು. ಅದು ನಮ್ಮ ಕಾನೂನುಬದ್ಧ ಗುರಿಯಾಗಿತ್ತು. ಏಕೆಂದರೆ ಅವರು ಮಿಲಿಟರಿಯ ಅಧಿಕಾರಿಯಾಗಿದ್ದರು. ಸರ್ಜಿಕಲ್ ಸ್ಟ್ರೈಕ್ ಒಂದು ಸೀಮಿತ ಕ್ರಮ. ಇದು ಯಾವುದೇ ಅಪಘಾತಕ್ಕೆ ಕಾರಣವಾಗುವುದಿಲ್ಲ ಎಂದು ನಾವು ಸಬ್‌ಕಾನ್ಷಿಯಸ್ ಆಗಿ ಒಪ್ಪಿಕೊಂಡಿದ್ದೇವೆ. ಈಗ ನಾವು ಅದೇ ಸಬ್‌ಕಾನ್ಷಿಯಸ್‌ನಿಂದ ಅವರಿಗೆ ಹೇಳುತ್ತಿದ್ದೇವೆ, ಅವರು ಏನು ಮಾಡುತ್ತಾರೋ ನಾವು ಅದನ್ನು ಮಾತ್ರ ಮಾಡುತ್ತೇವೆ. ಇದು ಉಲ್ಬಣಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಭಾರತೀಯ ಮಾಧ್ಯಮಗಳು ಉಲ್ಲೇಖಿಸಿದ ವೀಡಿಯೋ;

ಯೂಟ್ಯೂಬ್‌ನಲ್ಲಿ ಈ ಚರ್ಚೆಯನ್ನು ಹುಡುಕಿದಾಗ, ಈ ವೀಡಿಯೋವನ್ನು “ಅಜೆಂಡಾ ಪಾಕಿಸ್ತಾನ” ಎಂಬ ಕಾರ್ಯಕ್ರಮದ ಭಾಗವಾಗಿ HUM ಸುದ್ದಿ ಮಾಧ್ಯಮದಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. ಇಲ್ಲಿನ ಚರ್ಚೆಯ ವಿಷಯವೇನೆಂದರೆ, “ಶತ್ರುಗಳ ಶಬ್ದಕೋಶವನ್ನು ಬಳಸುವುದರ ಮೂಲಕ (ಈ ಸಂದರ್ಭದಲ್ಲಿ ಸರ್ಜಿಕಲ್ ಸ್ಟ್ರೈಕ್ ) ಪಾಕಿಸ್ತಾನ ತನ್ನದೇ ಆದ ಪ್ರಕರಣವನ್ನು ದುರ್ಬಲಗೊಳಿಸುತ್ತಿದೆಯೇ?” ಎನ್ನುವುದು. ಜಾಫರ್ ಹಿಲಾಲಿ ಈ ಪ್ರಶ್ನೆಗೆ ಸುಮಾರು 4:17 ನೇ ನಿಮಿಷದಲ್ಲಿ ಉತ್ತರಿಸಲು ಪ್ರಾರಂಭಿಸುತ್ತಾರೆ. ಸುಮಾರು 5:14 ನೇ ನಿಮಿಷದಲ್ಲಿ, “ಭಾರತ, ನೀವು ಏನು ಮಾಡಿದ್ದೀರಿ? ಇದು ಯುದ್ಧ. ಅಂತರರಾಷ್ಟ್ರೀಯ ಗಡಿಯನ್ನು ದಾಟುವ ಮೂಲಕ ಭಾರತವು ಕನಿಷ್ಠ 300 ಜನರನ್ನು ಕೊಲ್ಲುವ ಉದ್ದೇಶದಿಂದ ಈ ಕೃತ್ಯ ಎಸಗಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಅಮೆರಿಕ ಅಧ್ಯಕ್ಷೀಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್‌‌ಗೆ ಆಹ್ವಾನವಿದೆಯೆ?

ಮುಂದಿನ ವಾಕ್ಯದಲ್ಲಿ 5:29 ನೇ ನಿಮಿಷದಲ್ಲಿ ಜಾಫರ್ ಹಿಲಾಲಿ ಭಾರತೀಯ ಕಾರ್ಯಾಚರಣೆ ವಿಫಲವಾಗಿದೆ ಎಂದು ಹೇಳುತ್ತಾರೆ. “ಕಾಕತಾಳೀಯವೆಂಬಂತೆ ಅವರು ಸಾಯಲಿಲ್ಲ (ಪಾಕಿಸ್ತಾನಿ ಜನರು). ಆದರೆ ಭಾರತವು ಫುಟ್ಬಾಲ್ ಮೈದಾನಕ್ಕೆ ಬಾಂಬ್ ಸ್ಫೋಟಿಸಿತು” ಎಂದು ಹೇಳಿದ್ದಾರೆ.

ವಾಸ್ತವದಲ್ಲಿ, ಈ ಭಾಗದ ವೀಡಿಯೋ ವೈರಲ್ ಆಗುವ ಮೊದಲು ಪಾಕಿಸ್ತಾನದ 300 ಜನರನ್ನು ಕೊಲ್ಲುವ ಭಾರತದ ಉದ್ದೇಶದ ಬಗ್ಗೆ ಹಿಲಾಲಿ ಮಾತನಾಡುತ್ತಿದ್ದರು.

ಸುಮಾರು 4:30 ನೇ ನಿಮಿಷಗಳಲ್ಲಿ ಅವರು ಹೀಗೆ ಹೇಳುತ್ತಾರೆ, “300 ಮಕ್ಕಳು ಅಧ್ಯಯನ ಮಾಡುತ್ತಿರುವ ಮದರಸಾದಲ್ಲಿ ದಾಳಿ ಮಾಡುವುದು ನಿಮ್ಮ ಉದ್ದೇಶವಾಗಿತ್ತು ಎಂದು ಹೇಳಲಾಗುತ್ತದೆ. ಇದರರ್ಥ 300 ಜನರನ್ನು ಕೊಲ್ಲುವುದು ನಿಮ್ಮ ಉದ್ದೇಶವಾಗಿತ್ತು ಎಂಬುದು. ಆದರೆ ಅವರು ಅಲ್ಲಿ ಇರಲಿಲ್ಲ. ಭಾರತಕ್ಕೆ ಸಿಕ್ಕಿದ ಮಾಹಿತಿ ತಪ್ಪಾಗಿದೆ. ಹಾಗಾಗಿ ಅದು ಸರ್ಜಿಕಲ್ ಸ್ಟ್ರೈಕ್ ಆಗಲಿಲ್ಲ. ನಿಮ್ಮ ಬಾಂಬ್ ಅನ್ನು ಫುಟ್ಬಾಲ್ ಮೈದಾನದಲ್ಲಿ ಎಸೆದಿದ್ದೀರಿ” ಎಂದು ಹೇಳಿದ್ದಾರೆ.

ಹಾಗಾಗಿ ಬಾಲಕೋಟ್ ವೈಮಾನಿಕ ದಾಳಿಯಲ್ಲಿ 300 ಮಂದಿ ಸಾವನ್ನಪ್ಪಿದ್ದಾರೆ ಎಂದು ಯಾವುದೇ ಸಮಯದಲ್ಲಿಯೂ ಪಾಕಿಸ್ತಾನದ ರಾಜತಾಂತ್ರಿಕರು ಒಪ್ಪಿಕೊಂಡಿಲ್ಲ ಎಂಬುದು ವಿಡಿಯೋದಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಪ್ರತಿಪಾದನೆಯ ಮೂಲ:

ಯಾವುದೇ ಮಾಧ್ಯಮ ಸಂಸ್ಥೆಗಳು ತಮ್ಮ ವರದಿಗಳಲ್ಲಿ ಮೂಲ ವೀಡಿಯೊವನ್ನು ಉಲ್ಲೇಖಿಸಿಲ್ಲ. ಆದರೆ ರಿಪಬ್ಲಿಕ್ ಮತ್ತು ಎನ್ಇ ನೌ ಟ್ವಿಟರ್ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊವನ್ನು ಎಂಬೆಡ್ ಮಾಡಿದೆ. ನಾವು ಮೂಲ ವೀಡಿಯೊವನ್ನು ರಿಪಬ್ಲಿಕ್ ಎಂಬೆಡ್ ಮಾಡಿದ ವೀಡಿಯೊದೊಂದಿಗೆ ಹೋಲಿಸಿದರೆ, 7 ರಿಂದ 9 ನೇ ಸೆಕೆಂಡುಗಳಲ್ಲಿ ಎಡಿಟ್ ಮಾಡಿರುವುದು ಕಂಡುಬರುತ್ತದೆ. “ಮರ್ನಾ (ಕೊಲ್ಲಲು)” ಎಂಬ ಪದವು “ಮಾರ (ಕೊಲ್ಲಲ್ಪಟ್ಟರು)” ಎಂದು ಹಿಲಾಲಿ ಹೇಳಿದಂತೆ ಭಾಸವಾಗುತ್ತದೆ. ‘ಎನ್’ ಉಚ್ಚಾರಣೆಯನ್ನು ಎಡಿಟ್ ಮಾಡಲಾಗಿದೆ.

 

ಮೇಲಿನ ಪ್ರತಿಪಾದನೆಯ ನಂತರ ಅವರ ಹೇಳಿಕೆಯನ್ನು ವೈರಲ್ ಕ್ಲಿಪ್‌ನಲ್ಲಿ ತೆಗೆದುಹಾಕಲಾಗಿದೆ. ಭಾರತದ ಕಾರ್ಯಾಚರಣೆ ವಿಫಲವಾಗಿದೆ ಮತ್ತು ವಾಯುಪಡೆಯು ಫುಟ್ಬಾಲ್ ಮೈದಾನದ ಮೇಲೆ ಬಾಂಬ್ ಸ್ಫೋಟಿಸಿತು ಎಂದು ಹಿಲಾಲಿ ಹೇಳುತ್ತಾರೆ.

ಇದಲ್ಲದೆ, ವೈರಲ್ ವೀಡಿಯೊವನ್ನು ತಲೆಕೆಳಗಾಗಿ ಮತ್ತು ಸ್ಕ್ರೀನ್-ರೆಕಾರ್ಡ್ ಮಾಡಲಾಗಿದೆ. ಮೂಲ ವೀಡಿಯೊ ಬಾಲಕೋಟ್‌ನ ಹಾನಿಗೊಳಗಾದ ಮರಗಳನ್ನು ತೋರಿಸುತ್ತದೆ ಮತ್ತು ತಿರುಚಿರುವ ವೀಡಿಯೊ ಮಿಲಿಟರಿ ಕ್ಯಾಂಪ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೋರಿಸುತ್ತದೆ. ತಿರುಚಿದ ವೀಡಿಯೊವು ಫಲಕದಲ್ಲಿರುವ ಜನರ ಹೆಸರನ್ನು ಸಹ ಒಳಗೊಂಡಿರುವುದಿಲ್ಲ ಮತ್ತು ಮೂಲ ವೀಡಿಯೊದಲ್ಲಿನ ಬಿಳಿ ಬಾರ್ಡರ್ ಇದೆ. ಆದರೆ ತಿರುಚಿದ ವೀಡಿಯೋದಲ್ಲಿ ಬಾರ್ಡರ್ ಗುಲಾಬಿ ಬಣ್ಣದ್ದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ತನ್ನ ಹೇಳಿಕೆಯನ್ನು ಎಡಿಟ್ ಮಾಡಲಾಗಿದೆ ಎಂದು ಸ್ವತಃ ಜಾಫರ್ ಹಿಲಾಲಿ ದೃಢಪಡಿಸಿದ್ದಾರೆ.

ಭಾರತದ ವೈಮಾನಿಕ ದಾಳಿಯು ಬಾಲಕೋಟ್‌ನಲ್ಲಿ 300 ಜನರನ್ನು ಕೊಂದಿದೆ ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಜಾಫರ್ ಹಿಲಾಲಿ ಒಪ್ಪಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಸುಳ್ಳು ವರದಿ ಮಾಡಿವೆ. ಆದರೆ ಈ ವರದಿಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾದ ತಿರುಚಿದ ವೀಡಿಯೋಗಳನ್ನು ಬಳಸಲಾಗಿದೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...