Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

- Advertisement -
- Advertisement -

ಸ್ವತಃ ಕಾಂಗ್ರೆಸ್ ವಕ್ತಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯನ್ನು “ಹೀರೋ” ಎಂದು ಹೊಗಳಿದ್ದಾರೆ; ರಾಹುಲ್ ಗಾಂಧಿಯವರು ಮೋದಿಯವರೊಂದಿಗೆ ಸ್ಪರ್ಧಿಸುವುದು “ಬಹಳ ಕಷ್ಟ” ಎಂದು ಒಪ್ಪಿಕೊಂಡಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಸತ್ಯಾಂಶವೇನು?

ಕಾಶಿ-ವಿಶ್ವನಾಥ ಕಾರಿಡಾರ್ ಉದ್ಘಾಟನಾ ಸಮಾರಂಭದ ನಂತರ ತಮ್ಮ ವಿಶ್ಲೇಷಣೆಗಳನ್ನು ವ್ಯಕ್ತಿಯೊಬ್ಬರು ಹಂಚಿಕೊಳ್ಳುತ್ತಿರುವುದನ್ನು ಇಲ್ಲಿ ಕಾಣಬಹುದು.

ವೈರಲ್ ವಿಡಿಯೋದಲ್ಲಿ ಚಾನೆಲ್ ಲೋಗೋ ಸ್ಪಷ್ಟವಾಗಿ ಕಾಣಿಸದ ಕಾರಣ, ಕಾಂಗ್ರೆಸ್ ವಕ್ತಾರ ಎಂದು ಹೇಳಲಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಯತ್ನಿಸಲಾಯಿತು. ಮಾತನಾಡುತ್ತಿರುವ ವ್ಯಕ್ತಿಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ರಿವರ್ಸ್ ಸರ್ಚ್ ಮಾಡಿದಾಗ ಇದೇ ವ್ಯಕ್ತಿಯನ್ನು ಹೋಲುವ ಒಬ್ಬರು ಕಾಂಗ್ರೆಸ್ ನಾಯಕ ಸಲ್ಮಾನ್‌ ಖುರ್ಷಿದ್‌ ಅವರ ಪುಸ್ತಕದ ವಿವಾದದ ಕುರಿತು ಮಾತನಾಡುವ ವಿಡಿಯೊ ಕ್ಲಿಪ್‌ ಕೂಡ ಸಿಕ್ಕಿತು.

ಈ ವಿಡಿಯೊ ಕ್ಲಿಪ್‌ನಲ್ಲಿ ವ್ಯಕ್ತಿಯ ಹೆಸರು ಅಥವಾ ಪದನಾಮವನ್ನು ಉಲ್ಲೇಖಿಸದಿದ್ದರೂ ಚಾನೆಲ್ ಲೋಗೋ “ಫಸ್ಟ್‌ಇಂಡಿಯಾ ನ್ಯೂಸ್‌” ಎಂದಿರುವುದು ಕಂಡುಬಂತು. ವೈರಲ್ ಆಗಿರುವ ವಿಡಿಯೊ ಕ್ಲಿಪ್‌ನ ಮೂಲ ವಿಡಿಯೊವನ್ನು ಸರ್ಚ್‌ಮಾಡಿದಾಗ ಮೂಲ ವೀಡಿಯೊ ಡಿಸೆಂಬರ್ 14ರಂದು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊದಿಂದ ಈಗ ವೈರಲ್ ಆಗಿರುವ ವಿಡಿಯೊ ಕ್ಲಿಪ್ ಕಟ್‌ ಮಾಡಲಾಗಿದೆ. ಈ ವೀಡಿಯೊದ ಆರಂಭದಲ್ಲಿ, ಸುದ್ದಿ ವಾಹಿನಿಯ ನಿರೂಪಕರು ಚರ್ಚೆಯಲ್ಲಿ ಭಾಗವಹಿಸಿರುವ ವ್ಯಕ್ತಿಯನ್ನು ಫಸ್ಟ್‌ ಇಂಡಿಯಾ ನ್ಯೂಸ್‌‌ ಚಾನೆಲ್ ಮುಖ್ಯಸ್ಥ ಜಗದೀಶ್ ಚಂದ್ರ ಎಂದು ಪರಿಚಯಿಸುವುದನ್ನು ಕೇಳಬಹುದು.

ಈ ಚಾನಲ್‌ನ ಟ್ವೀಟರ್‌ ಖಾತೆಯಲ್ಲಿ ಮತ್ತೊಂದು ವೀಡಿಯೊ ಗಮನಿಸಿದಾಗ ಜಗದೀಶ್ ಚಂದ್ರ ಅವರ ಪರಿಚಯವನ್ನು ಕಾಣಬಹುದು. ಜಗದೀಶ್ ಚಂದ್ರ ಅವರು ಫಸ್ಟ್‌ಇಂಡಿಯಾ ನ್ಯೂಸ್‌ಚಾನೆಲ್ ಮುಖ್ಯಸ್ಥ ಎಂದು ಇಲ್ಲಿ ಬರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅವರ ಹೆಸರನ್ನು ಗೂಗಲ್ ಮಾಡಿದಾಗ “ಟೈಕೂನ್ ಮ್ಯಾಗಜೀನ್”ನಲ್ಲಿ ಜುಲೈ 2021ರಲ್ಲಿ ಪ್ರಕಟವಾದ ಲೇಖನವನ್ನು ಗಮನಿಸಿದೆವು. ಲೇಖನದಲ್ಲಿ ಜಗದೀಶ್‌ಚಂದ್ರ ಅವರನ್ನು “ಫಸ್ಟ್ ಇಂಡಿಯಾ ನ್ಯೂಸ್”ನ CMD ಮತ್ತು “ಫಸ್ಟ್ ಇಂಡಿಯಾ” ಸಂಪಾದಕ ಎಂದು ಪರಿಚಯಿಸಲಾಗಿದೆ. ಚಂದ್ರ ಅವರು ರಾಜಸ್ಥಾನದ ಉನ್ನತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು, ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದರು ಎಂದು ಅಲ್ಲಿ ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿ ಕಾಂಗ್ರೆಸ್ ವಕ್ತಾರರಲ್ಲ, ರಾಜಸ್ಥಾನ ಮೂಲದ ಸುದ್ದಿವಾಹಿನಿಯೊಂದರ ಮುಖ್ಯಸ್ಥ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...