Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

- Advertisement -
- Advertisement -

ಸ್ವತಃ ಕಾಂಗ್ರೆಸ್ ವಕ್ತಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯನ್ನು “ಹೀರೋ” ಎಂದು ಹೊಗಳಿದ್ದಾರೆ; ರಾಹುಲ್ ಗಾಂಧಿಯವರು ಮೋದಿಯವರೊಂದಿಗೆ ಸ್ಪರ್ಧಿಸುವುದು “ಬಹಳ ಕಷ್ಟ” ಎಂದು ಒಪ್ಪಿಕೊಂಡಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಸತ್ಯಾಂಶವೇನು?

ಕಾಶಿ-ವಿಶ್ವನಾಥ ಕಾರಿಡಾರ್ ಉದ್ಘಾಟನಾ ಸಮಾರಂಭದ ನಂತರ ತಮ್ಮ ವಿಶ್ಲೇಷಣೆಗಳನ್ನು ವ್ಯಕ್ತಿಯೊಬ್ಬರು ಹಂಚಿಕೊಳ್ಳುತ್ತಿರುವುದನ್ನು ಇಲ್ಲಿ ಕಾಣಬಹುದು.

ವೈರಲ್ ವಿಡಿಯೋದಲ್ಲಿ ಚಾನೆಲ್ ಲೋಗೋ ಸ್ಪಷ್ಟವಾಗಿ ಕಾಣಿಸದ ಕಾರಣ, ಕಾಂಗ್ರೆಸ್ ವಕ್ತಾರ ಎಂದು ಹೇಳಲಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಯತ್ನಿಸಲಾಯಿತು. ಮಾತನಾಡುತ್ತಿರುವ ವ್ಯಕ್ತಿಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ರಿವರ್ಸ್ ಸರ್ಚ್ ಮಾಡಿದಾಗ ಇದೇ ವ್ಯಕ್ತಿಯನ್ನು ಹೋಲುವ ಒಬ್ಬರು ಕಾಂಗ್ರೆಸ್ ನಾಯಕ ಸಲ್ಮಾನ್‌ ಖುರ್ಷಿದ್‌ ಅವರ ಪುಸ್ತಕದ ವಿವಾದದ ಕುರಿತು ಮಾತನಾಡುವ ವಿಡಿಯೊ ಕ್ಲಿಪ್‌ ಕೂಡ ಸಿಕ್ಕಿತು.

ಈ ವಿಡಿಯೊ ಕ್ಲಿಪ್‌ನಲ್ಲಿ ವ್ಯಕ್ತಿಯ ಹೆಸರು ಅಥವಾ ಪದನಾಮವನ್ನು ಉಲ್ಲೇಖಿಸದಿದ್ದರೂ ಚಾನೆಲ್ ಲೋಗೋ “ಫಸ್ಟ್‌ಇಂಡಿಯಾ ನ್ಯೂಸ್‌” ಎಂದಿರುವುದು ಕಂಡುಬಂತು. ವೈರಲ್ ಆಗಿರುವ ವಿಡಿಯೊ ಕ್ಲಿಪ್‌ನ ಮೂಲ ವಿಡಿಯೊವನ್ನು ಸರ್ಚ್‌ಮಾಡಿದಾಗ ಮೂಲ ವೀಡಿಯೊ ಡಿಸೆಂಬರ್ 14ರಂದು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊದಿಂದ ಈಗ ವೈರಲ್ ಆಗಿರುವ ವಿಡಿಯೊ ಕ್ಲಿಪ್ ಕಟ್‌ ಮಾಡಲಾಗಿದೆ. ಈ ವೀಡಿಯೊದ ಆರಂಭದಲ್ಲಿ, ಸುದ್ದಿ ವಾಹಿನಿಯ ನಿರೂಪಕರು ಚರ್ಚೆಯಲ್ಲಿ ಭಾಗವಹಿಸಿರುವ ವ್ಯಕ್ತಿಯನ್ನು ಫಸ್ಟ್‌ ಇಂಡಿಯಾ ನ್ಯೂಸ್‌‌ ಚಾನೆಲ್ ಮುಖ್ಯಸ್ಥ ಜಗದೀಶ್ ಚಂದ್ರ ಎಂದು ಪರಿಚಯಿಸುವುದನ್ನು ಕೇಳಬಹುದು.

ಈ ಚಾನಲ್‌ನ ಟ್ವೀಟರ್‌ ಖಾತೆಯಲ್ಲಿ ಮತ್ತೊಂದು ವೀಡಿಯೊ ಗಮನಿಸಿದಾಗ ಜಗದೀಶ್ ಚಂದ್ರ ಅವರ ಪರಿಚಯವನ್ನು ಕಾಣಬಹುದು. ಜಗದೀಶ್ ಚಂದ್ರ ಅವರು ಫಸ್ಟ್‌ಇಂಡಿಯಾ ನ್ಯೂಸ್‌ಚಾನೆಲ್ ಮುಖ್ಯಸ್ಥ ಎಂದು ಇಲ್ಲಿ ಬರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅವರ ಹೆಸರನ್ನು ಗೂಗಲ್ ಮಾಡಿದಾಗ “ಟೈಕೂನ್ ಮ್ಯಾಗಜೀನ್”ನಲ್ಲಿ ಜುಲೈ 2021ರಲ್ಲಿ ಪ್ರಕಟವಾದ ಲೇಖನವನ್ನು ಗಮನಿಸಿದೆವು. ಲೇಖನದಲ್ಲಿ ಜಗದೀಶ್‌ಚಂದ್ರ ಅವರನ್ನು “ಫಸ್ಟ್ ಇಂಡಿಯಾ ನ್ಯೂಸ್”ನ CMD ಮತ್ತು “ಫಸ್ಟ್ ಇಂಡಿಯಾ” ಸಂಪಾದಕ ಎಂದು ಪರಿಚಯಿಸಲಾಗಿದೆ. ಚಂದ್ರ ಅವರು ರಾಜಸ್ಥಾನದ ಉನ್ನತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು, ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದರು ಎಂದು ಅಲ್ಲಿ ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿ ಕಾಂಗ್ರೆಸ್ ವಕ್ತಾರರಲ್ಲ, ರಾಜಸ್ಥಾನ ಮೂಲದ ಸುದ್ದಿವಾಹಿನಿಯೊಂದರ ಮುಖ್ಯಸ್ಥ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...