Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಸಾಮರ್ಥ್ಯ ಅಲ್ಲಗಳೆದು ಕಾಂಗ್ರೆಸ್ ವಕ್ತಾರರೊಬ್ಬರು ಮೋದಿಯನ್ನು ಹೊಗಳಿದ್ದಾರೆಯೇ?

- Advertisement -
- Advertisement -

ಸ್ವತಃ ಕಾಂಗ್ರೆಸ್ ವಕ್ತಾರರೊಬ್ಬರು ಪ್ರಧಾನಿ ನರೇಂದ್ರ ಮೋದಿಯನ್ನು “ಹೀರೋ” ಎಂದು ಹೊಗಳಿದ್ದಾರೆ; ರಾಹುಲ್ ಗಾಂಧಿಯವರು ಮೋದಿಯವರೊಂದಿಗೆ ಸ್ಪರ್ಧಿಸುವುದು “ಬಹಳ ಕಷ್ಟ” ಎಂದು ಒಪ್ಪಿಕೊಂಡಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಸತ್ಯಾಂಶವೇನು?

ಕಾಶಿ-ವಿಶ್ವನಾಥ ಕಾರಿಡಾರ್ ಉದ್ಘಾಟನಾ ಸಮಾರಂಭದ ನಂತರ ತಮ್ಮ ವಿಶ್ಲೇಷಣೆಗಳನ್ನು ವ್ಯಕ್ತಿಯೊಬ್ಬರು ಹಂಚಿಕೊಳ್ಳುತ್ತಿರುವುದನ್ನು ಇಲ್ಲಿ ಕಾಣಬಹುದು.

ವೈರಲ್ ವಿಡಿಯೋದಲ್ಲಿ ಚಾನೆಲ್ ಲೋಗೋ ಸ್ಪಷ್ಟವಾಗಿ ಕಾಣಿಸದ ಕಾರಣ, ಕಾಂಗ್ರೆಸ್ ವಕ್ತಾರ ಎಂದು ಹೇಳಲಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಯತ್ನಿಸಲಾಯಿತು. ಮಾತನಾಡುತ್ತಿರುವ ವ್ಯಕ್ತಿಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ರಿವರ್ಸ್ ಸರ್ಚ್ ಮಾಡಿದಾಗ ಇದೇ ವ್ಯಕ್ತಿಯನ್ನು ಹೋಲುವ ಒಬ್ಬರು ಕಾಂಗ್ರೆಸ್ ನಾಯಕ ಸಲ್ಮಾನ್‌ ಖುರ್ಷಿದ್‌ ಅವರ ಪುಸ್ತಕದ ವಿವಾದದ ಕುರಿತು ಮಾತನಾಡುವ ವಿಡಿಯೊ ಕ್ಲಿಪ್‌ ಕೂಡ ಸಿಕ್ಕಿತು.

ಈ ವಿಡಿಯೊ ಕ್ಲಿಪ್‌ನಲ್ಲಿ ವ್ಯಕ್ತಿಯ ಹೆಸರು ಅಥವಾ ಪದನಾಮವನ್ನು ಉಲ್ಲೇಖಿಸದಿದ್ದರೂ ಚಾನೆಲ್ ಲೋಗೋ “ಫಸ್ಟ್‌ಇಂಡಿಯಾ ನ್ಯೂಸ್‌” ಎಂದಿರುವುದು ಕಂಡುಬಂತು. ವೈರಲ್ ಆಗಿರುವ ವಿಡಿಯೊ ಕ್ಲಿಪ್‌ನ ಮೂಲ ವಿಡಿಯೊವನ್ನು ಸರ್ಚ್‌ಮಾಡಿದಾಗ ಮೂಲ ವೀಡಿಯೊ ಡಿಸೆಂಬರ್ 14ರಂದು ಪೋಸ್ಟ್ ಮಾಡಲಾಗಿದೆ. ಈ ವಿಡಿಯೊದಿಂದ ಈಗ ವೈರಲ್ ಆಗಿರುವ ವಿಡಿಯೊ ಕ್ಲಿಪ್ ಕಟ್‌ ಮಾಡಲಾಗಿದೆ. ಈ ವೀಡಿಯೊದ ಆರಂಭದಲ್ಲಿ, ಸುದ್ದಿ ವಾಹಿನಿಯ ನಿರೂಪಕರು ಚರ್ಚೆಯಲ್ಲಿ ಭಾಗವಹಿಸಿರುವ ವ್ಯಕ್ತಿಯನ್ನು ಫಸ್ಟ್‌ ಇಂಡಿಯಾ ನ್ಯೂಸ್‌‌ ಚಾನೆಲ್ ಮುಖ್ಯಸ್ಥ ಜಗದೀಶ್ ಚಂದ್ರ ಎಂದು ಪರಿಚಯಿಸುವುದನ್ನು ಕೇಳಬಹುದು.

ಈ ಚಾನಲ್‌ನ ಟ್ವೀಟರ್‌ ಖಾತೆಯಲ್ಲಿ ಮತ್ತೊಂದು ವೀಡಿಯೊ ಗಮನಿಸಿದಾಗ ಜಗದೀಶ್ ಚಂದ್ರ ಅವರ ಪರಿಚಯವನ್ನು ಕಾಣಬಹುದು. ಜಗದೀಶ್ ಚಂದ್ರ ಅವರು ಫಸ್ಟ್‌ಇಂಡಿಯಾ ನ್ಯೂಸ್‌ಚಾನೆಲ್ ಮುಖ್ಯಸ್ಥ ಎಂದು ಇಲ್ಲಿ ಬರೆಯಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅವರ ಹೆಸರನ್ನು ಗೂಗಲ್ ಮಾಡಿದಾಗ “ಟೈಕೂನ್ ಮ್ಯಾಗಜೀನ್”ನಲ್ಲಿ ಜುಲೈ 2021ರಲ್ಲಿ ಪ್ರಕಟವಾದ ಲೇಖನವನ್ನು ಗಮನಿಸಿದೆವು. ಲೇಖನದಲ್ಲಿ ಜಗದೀಶ್‌ಚಂದ್ರ ಅವರನ್ನು “ಫಸ್ಟ್ ಇಂಡಿಯಾ ನ್ಯೂಸ್”ನ CMD ಮತ್ತು “ಫಸ್ಟ್ ಇಂಡಿಯಾ” ಸಂಪಾದಕ ಎಂದು ಪರಿಚಯಿಸಲಾಗಿದೆ. ಚಂದ್ರ ಅವರು ರಾಜಸ್ಥಾನದ ಉನ್ನತ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು, ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದರು ಎಂದು ಅಲ್ಲಿ ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿ ಕಾಂಗ್ರೆಸ್ ವಕ್ತಾರರಲ್ಲ, ರಾಜಸ್ಥಾನ ಮೂಲದ ಸುದ್ದಿವಾಹಿನಿಯೊಂದರ ಮುಖ್ಯಸ್ಥ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಷ್ಟ್ರೀಯ ಹೆದ್ದಾರಿಗಳು, ವಾಹನಗಳ ಮೇಲೆ ಮುಸ್ಲಿಮರು ನಮಾಜ್ ಮಾಡಿದ್ದು ನಿಜವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...