Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪ.ಬಂಗಾಳದಲ್ಲಿ ಹಿಂದೂಗಳ ಮೇಲೆ ಮತ್ತೊಮ್ಮೆ ಹಲ್ಲೆ ನಡೆದಿದೆಯೇ?

ಫ್ಯಾಕ್ಟ್‌ಚೆಕ್: ಪ.ಬಂಗಾಳದಲ್ಲಿ ಹಿಂದೂಗಳ ಮೇಲೆ ಮತ್ತೊಮ್ಮೆ ಹಲ್ಲೆ ನಡೆದಿದೆಯೇ?

ಫೇಸ್‌ಬುಕ್‌ನ ಬಳಕೆದಾರರೊಬ್ಬರು,"ಬಾಂಗ್ಲಾದಲ್ಲಿ ಮತ್ತೆ, ದೀದಿಯ ಪೊಲೀಸರು ಹಿಂದೂ ಧರ್ಮದ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಬಳಕೆದಾರರು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಫೇಸ್‌ಬುಕ್‌ನ ಬಳಕೆದಾರರೊಬ್ಬರು,”ಬಾಂಗ್ಲಾದಲ್ಲಿ ಮತ್ತೆ, ದೀದಿಯ ಪೊಲೀಸರು ಹಿಂದೂ ಧರ್ಮದ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

ಈ ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು. ಇದೇ ಹೇಳಿಕೆಯೊಡನೆ ಅನೇಕರು ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್:

ಈ ಚಿತ್ರಗಳು ಬಿಹಾರದ ಮುಂಗೆರ್‌ನಲ್ಲಿ ನಡೆದ ಘಟನೆಯದ್ದಾಗಿದೆ. ಅಕ್ಟೋಬರ್ 26, ಸೋಮವಾರ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ಪೂಜಾ ಮೆರವಣಿಗೆಯ ವೇಳೆ ನಡೆದ ಘರ್ಷಣೆಯ ನಡುವೆ ಪೊಲೀಸರು ಗುಂಡು ಹಾರಿಸಿದ ನಂತರ ಅನುರಾಗ್ ಪೋದ್ದಾರ್ (25) ಸಾವನ್ನಪ್ಪಿದ್ದರು ಎಂದು ಕ್ವಿಂಟ್ ವರದಿ ಮಾಡಿದ್ದ ವೈರಲ್ ವೀಡಿಯೊದಲ್ಲಿ ಈ ಚಿತ್ರಗಳು ಕಂಡುಬಂದಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಜನಸಮೂಹವನ್ನು ಚದುರಿಸುವ ಪ್ರಯತ್ನದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ. ಜನಸಮೂಹವು ತನ್ನ ಕಡೆಯಿಂದ ಪ್ರತಿದಾಳಿ ನಡೆಸಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಪಂಡಲ್ ಸಂಘಟಕರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಸುಮಾರು 30 ಜನರು ಗಾಯಗೊಂಡಿದ್ದರು.

ಘಟನೆಯ ಅದೇ ದೃಶ್ಯಗಳನ್ನು ಹೊತ್ತ ಟೈಮ್ಸ್ ಆಫ್ ಇಂಡಿಯಾ ವರದಿಯು ಮುಂಗೆರ್ ಎಸ್‌ಪಿ ಲಿಪಿ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, “ಘಟನೆಯ ಸಮಯದಲ್ಲಿ ಭದ್ರತಾ ಸಿಬ್ಬಂದಿಯ ಕಡೆಯಿಂದ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ಹಿಂಸಾತ್ಮಕ ಪ್ರಚೋದನೆ ನೀಡುತ್ತಿದ್ದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ನಡೆಯಿತು. ಪೊಲೀಸರು ಗರಿಷ್ಠ ಸಂಯಮವನ್ನು ಕಾಯ್ದುಕೊಂಡಿದ್ದಾರೆ” ಎಂದು ವರದಿ ಮಾಡಿದೆ.

ಹಾಗಾಗಿ, ಈ ಘಟನೆ ನಡೆದದ್ದು ಪಶ್ಚಿಮ ಬಂಗಾಳದಲ್ಲಿ ಅಲ್ಲ. ಬದಲಿಗೆ ಬಿಹಾರದ ಮುಂಗೆರ್‌ನಲ್ಲಿ. ವರದಿಗಳ ಪ್ರಕಾರ ಒಬ್ಬ ವ್ಯಕ್ತಿಯನ್ನು ಮಾತ್ರ ಮೃತಪಟ್ಟನೆಂದು ಘೋಷಿಸಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ವಿಶ್ವದ ಏಳನೇ ಹೆಚ್ಚು ವಿದ್ಯಾವಂತ ನಾಯಕ ಎಂಬುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...