Homeಕರ್ನಾಟಕಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನೋಟಿಸಿನಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಕನ್ನಡದ ಖಾಸಗಿ ಸುದ್ದಿ ಚಾನೆಲ್‌ಗಳಾದ ಟಿವಿ9, ಪಬ್ಲಿಕ್‌ ಟಿವಿ, ಸುರ್ವಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯಲಿದ್ದಾರೆ ಎಂಬ ಸಂದೇಶವಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಂದೇಶದಲ್ಲಿ, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ ಎಂದು ಮಾಹಿತಿ ಕೂಡಾ ಇದ್ದು ಇದನ್ನು ಸತ್ಯವೆಂದು ನಂಬಿದ ಹಲವಾರು ಜನರು ಅದನ್ನು ತಮ್ಮ ಖಾತೆಗಳಲ್ಲಿ ಹಂಚುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಕೊರೊನಾ ವಿಚಾರದಲ್ಲಿ ಮಾಧ್ಯಮಗಳ ಕಿರುಚಾಟ ತಾಳಲಾರದ ಯಾವುದೋ ಟ್ರೋಲ್‌ ತಂಡ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಆರಂಭವಾದಾಗಿನಿಂದ ಕೊರೊನಾವನ್ನು ನಿಭಾಯಿಸುವಲ್ಲಿ ವಿಫಲವಾದ ಸರ್ಕಾರದ ವಿರುದ್ದ ಪ್ರಶ್ನೆ ಕೇಳುವುದನ್ನು ಬಿಟ್ಟು,  ’ಕೊರೊನಾ ವಿರುದ್ದ ರಣಕಲಿ’, ’ಮೋದಿ ಮಂತ್ರ’, ’ಮೋದಿ ರಣತಂತ್ರ’, ’ಮೋದಿ ಅಬ್ಬರಕ್ಕೆ ಕೊರೊನಾ ಸೈಲೆಂಟ್‌’ ಎಂದೆಲ್ಲಾ ಕವರ್ ಸ್ಟೋರಿಗಳನ್ನು ಮಾಡಿದರ ವಿರುದ್ದ ಈ ಟ್ರೋಲ್ ಮಾಡಲಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಸಾರ್ವಜನಿಕರಿಗೆ ಸೂಚನೆ ಎಂಬ ಶಿರ್ಷಿಕೆ ಇರುವ ನೋಟಿಸಿನಲ್ಲಿ, “ಟಿವಿ9, ಪಬ್ಲಿಕ್‌ ಟಿವಿ, ಸುವರ್ಣ ನ್ಯೂಸ್‌ ಚಾನೆಲ್‌ಗಳ ಮಾಲಿಕರು ಕರ್ನಾಟಕದ ಪ್ರತಿ ಜಿಲ್ಲಾ ಮಟ್ಟದಲ್ಲಿಯೂ 100 ಹಾಸಿಗೆಗಳ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿದ್ದು, ಕೊರೊನಾ ರೋಗಿಗಳನ್ನು ಅವರೇ ಮನೆ ಬಾಗಿಲಿಗೆ ಬಂದು ಕರೆದೊಯ್ಯುತ್ತಾರೆ” ಎಂದು ಮಾಹಿತಿಯಿರುವ ಪತ್ರಿಕಾ ಪ್ರಕಟಣೆಯ ರೀತಿ ಬರೆಯಲಾಗಿದೆ. ಸಧ್ಯಕ್ಕೆ ಇದು ವೈರಲಾಗಿದ್ದು ಕೆಲವರಿಗೆ ಅದರ ವ್ಯಂಗ್ಯ ಅರ್ಥವಾದರೆ ಹಲವರು ಅದನ್ನು ನಿಜವೆಂದೇ ನಂಬಿದ್ದಾರೆ.ಅದರಲ್ಲಿರುವ ಸಂಪರ್ಕ ಸಂಖ್ಯೆಗೆ ಹಲವರು ಕರೆ ಮಾಡಿ ಮೂರು ಮಾಧ್ಯಮಗಳನ್ನೂ ಆಸ್ಪತ್ರೆ ನಿರ್ಮಾಣದ ಬಗ್ಗೆ ವಿಚಾರಿಸಲಾರಂಭಿಸಿದ್ದಾರೆ. ಇದು ಸದ್ಯ ಮಾಧ್ಯಮಗಳಿಗೆ ತಲೆ ನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆದರೆ, ಕರ್ನಾಕಟದ ಯಾವ ಮಾಧ್ಯಮವೂ ಕೊರೊನಾ ಆಸ್ಪತ್ರೆಗಳನ್ನು ತೆರೆಯುತ್ತಿಲ್ಲ ಎಂಬುದಷ್ಟೇ ವಾಸ್ತವದ ಸಂಗತಿ.


ಓದಿ: ಲಾಭದ ಗುಲಾಮಗಿರಿಗೆ ಬಿದ್ದಿರುವ ಮಾಧ್ಯಮ!; ಬಹುಜನ ಭಾರತ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...