Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

- Advertisement -
- Advertisement -

ಹಳೆಯ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿರುವ ವೈದ್ಯರ ಬಂಧನದ ದಶಕದಷ್ಟು ಹಳೆಯ ಸುದ್ದಿಯನ್ನು ಕೊರೊನಾ ವೈರಸ್ ಹೆಸರಲ್ಲಿ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ವೈರಲ್ ಚಿತ್ರವೊಂದನ್ನು “ಮೂತ್ರಪಿಂಡ ವ್ಯಾಪಾರಕ್ಕಾಗಿ ಕೊರೊನಾ ನೆಪದಲ್ಲಿ 125 ರೋಗಿಗಳನ್ನು ಕೊಂದ ವೈದ್ಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವೈರಲ್ ಮಾಡಲಾಗುತ್ತಿದೆ.

ಆದರೆ ಈ ಚಿತ್ರದಲ್ಲಿ ಇರುವ ವೈದ್ಯ 2004 ರಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದರು. ಇದರ ನಂತರ ಅವರಿಗೆ 2020 ರ ಜನವರಿಯಲ್ಲಿ 20 ದಿನಗಳ ಪೆರೋಲ್ ದೊರೆತಿದ್ದು, ಆಗ ನಾಪತ್ತೆಯಾಗಿದ್ದ ಅವರನ್ನು ಜುಲೈ 28 ರಂದು ಮತ್ತೆ ಬಂಧಿಸಲಾಯಿತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಮೇಲೆ ತಿಳಿಸಿದಂತೆ ಹಲವಾರು ಜನರು ಇದನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ವೈರಲ್ ಮಾಡಿದ್ದಾರೆ. ಈ ಸಂದೇಶಗಳು ದೆಹಲಿ ಪೊಲೀಸರು ಬಂಧಿಸಿರುವ ಡಾ.ದೇವೇಂದ್ರ ಶರ್ಮಾ ಕರೋನಾ ವೈರಸ್ ರೋಗನಿರ್ಣಯದ ಹೆಸರಿನಲ್ಲಿ ರೋಗಿಗಳ ಮೂತ್ರಪಿಂಡಗಳನ್ನು ಮಾರಾಟ ಮಾಡಿದ್ದಾರೆ.  ತನ್ನ ವಿರುದ್ಧದ ಸಾಕ್ಷ್ಯಗಳನ್ನು ತೊಡೆದುಹಾಕಲು ಈ ವೈದ್ಯ ರೋಗಿಗಳ ಮೃತ ದೇಹಗಳನ್ನು ಮೊಸಳೆಗಳಿಗೆ ಆಹಾರವಾಗಿ ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟ್‌ಚೆಕ್

ಈ ಸಂದೇಶವು ಟೈಮ್ಸ್ ಆಫ್ ಇಂಡಿಯಾ ವರದಿಯ ಚಿತ್ರದೊಂದಿಗೆ ಇದು ಪ್ರಸಾರವಾಗುತ್ತಿದೆ. ಆದರೆ ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವರದಿಯ ಪ್ರಕಾರ, ಆಯುರ್ವೇದ ವೈದ್ಯ ಡಾ.ದೇವೇಂದ್ರ ಶರ್ಮಾ ಅವರು ಸರಣಿ ಅಪರಾಧಗಳ ಅಪರಾಧಿಯಾಗಿದ್ದು, ಅವರು ಕಿಡ್ನಿ ದಂಧೆ ನಡೆಸುವುದು, ನಕಲಿ ಅನಿಲ ಏಜೆನ್ಸಿ ನಡೆಸುವುದು ಮತ್ತು ಕದ್ದ ವಾಹನಗಳ ಮಾರಾಟ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.

ದೇವೇಂದ್ರ ಅವರ ಕ್ರಿಮಿನಲ್ ದಾಖಲೆಯ ವಿವರಗಳನ್ನು ನೀಡುತ್ತಾ, 2004 ರಲ್ಲಿ ಅವರನ್ನು ಮೊದಲು ಬಂಧಿಸಲಾಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಾಗಿ ಅವರು 16 ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. 2020 ರ ಜನವರಿಯಲ್ಲಿ ಉತ್ತಮ ನಡವಳಿಕೆಗಾಗಿ ಅವರು 20 ದಿನಗಳ ಪೆರೋಲ್ ಪಡೆದಿದ್ದರು. ಆದರೆ ಪೆರೋಲ್‌ ಸಮಯದಲ್ಲಿ ಅವರು ನಾಪತ್ತೆಯಾಗಿದ್ದರು. ಜುಲೈ 28 ರಂದು ದೆಹಲಿ ಪೊಲೀಸ್ ಅಪರಾಧ ಶಾಖೆಯು ಅವರನ್ನು ಮತ್ತೆ ಬಂಧಿಸಲಾಯಿತು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಎನ್‌ಡಿಟಿವಿ ವರದಿಗಳು ಕೂಡಾ ಇದೇ ರೀತಿಯ ವಿವರಗಳನ್ನು ನೀಡಿವೆ. “ಅವರು ಮೊಸಳೆಗಳನ್ನು ಹೊಂದಿದ್ದ ಕಾಸ್‌ಗಂಜ್‌ನ ಹಜಾರಾ ಕಾಲುವೆಯಲ್ಲಿರುವ ಅಲಿಗಡ್‌ಗೆ ಹೋಗುವ ದಾರಿಯಲ್ಲಿ ಶವಗಳನ್ನು ಎಸೆಯುತ್ತಿದ್ದರು, ಆದ್ದರಿಂದ ಶವಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಪರಾಧ ಶಾಖೆಯ ಡಿಸಿಪಿ ರಾಕೇಶ್ ಪವೇರಿಯಾ ಅವರು, ‘ಕೊರೊನಾ ವೈರಸ್‌ಗೂ ಈ ಘಟನೆಗೂ ಯಾವುದೆ ಸಂಬಂಧವಿಲ್ಲವೆಂದಿದ್ದಾರೆಂದು’ ದಿ ಕ್ವಿಂಟ್ ವರದಿ ಮಾಡಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮೂತ್ರಪಿಂಡದ ದಂಧೆ ನಡೆಸಿದ್ದಕ್ಕಾಗಿ ಶಿಕ್ಷೆಗೊಳಗಾದ ಸರಣಿ ಅಪರಾಧಗಳ ಅಪರಾಧಿಯ ಬಂಧನವನ್ನು ಕೊರೊನಾ ವೈರಸ್ ಹೆಸರಲ್ಲಿ ಸುಳ್ಳು  ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....