Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

- Advertisement -
- Advertisement -

ಹಳೆಯ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿರುವ ವೈದ್ಯರ ಬಂಧನದ ದಶಕದಷ್ಟು ಹಳೆಯ ಸುದ್ದಿಯನ್ನು ಕೊರೊನಾ ವೈರಸ್ ಹೆಸರಲ್ಲಿ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ವೈರಲ್ ಚಿತ್ರವೊಂದನ್ನು “ಮೂತ್ರಪಿಂಡ ವ್ಯಾಪಾರಕ್ಕಾಗಿ ಕೊರೊನಾ ನೆಪದಲ್ಲಿ 125 ರೋಗಿಗಳನ್ನು ಕೊಂದ ವೈದ್ಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವೈರಲ್ ಮಾಡಲಾಗುತ್ತಿದೆ.

ಆದರೆ ಈ ಚಿತ್ರದಲ್ಲಿ ಇರುವ ವೈದ್ಯ 2004 ರಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದರು. ಇದರ ನಂತರ ಅವರಿಗೆ 2020 ರ ಜನವರಿಯಲ್ಲಿ 20 ದಿನಗಳ ಪೆರೋಲ್ ದೊರೆತಿದ್ದು, ಆಗ ನಾಪತ್ತೆಯಾಗಿದ್ದ ಅವರನ್ನು ಜುಲೈ 28 ರಂದು ಮತ್ತೆ ಬಂಧಿಸಲಾಯಿತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಮೇಲೆ ತಿಳಿಸಿದಂತೆ ಹಲವಾರು ಜನರು ಇದನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ವೈರಲ್ ಮಾಡಿದ್ದಾರೆ. ಈ ಸಂದೇಶಗಳು ದೆಹಲಿ ಪೊಲೀಸರು ಬಂಧಿಸಿರುವ ಡಾ.ದೇವೇಂದ್ರ ಶರ್ಮಾ ಕರೋನಾ ವೈರಸ್ ರೋಗನಿರ್ಣಯದ ಹೆಸರಿನಲ್ಲಿ ರೋಗಿಗಳ ಮೂತ್ರಪಿಂಡಗಳನ್ನು ಮಾರಾಟ ಮಾಡಿದ್ದಾರೆ.  ತನ್ನ ವಿರುದ್ಧದ ಸಾಕ್ಷ್ಯಗಳನ್ನು ತೊಡೆದುಹಾಕಲು ಈ ವೈದ್ಯ ರೋಗಿಗಳ ಮೃತ ದೇಹಗಳನ್ನು ಮೊಸಳೆಗಳಿಗೆ ಆಹಾರವಾಗಿ ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟ್‌ಚೆಕ್

ಈ ಸಂದೇಶವು ಟೈಮ್ಸ್ ಆಫ್ ಇಂಡಿಯಾ ವರದಿಯ ಚಿತ್ರದೊಂದಿಗೆ ಇದು ಪ್ರಸಾರವಾಗುತ್ತಿದೆ. ಆದರೆ ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವರದಿಯ ಪ್ರಕಾರ, ಆಯುರ್ವೇದ ವೈದ್ಯ ಡಾ.ದೇವೇಂದ್ರ ಶರ್ಮಾ ಅವರು ಸರಣಿ ಅಪರಾಧಗಳ ಅಪರಾಧಿಯಾಗಿದ್ದು, ಅವರು ಕಿಡ್ನಿ ದಂಧೆ ನಡೆಸುವುದು, ನಕಲಿ ಅನಿಲ ಏಜೆನ್ಸಿ ನಡೆಸುವುದು ಮತ್ತು ಕದ್ದ ವಾಹನಗಳ ಮಾರಾಟ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.

ದೇವೇಂದ್ರ ಅವರ ಕ್ರಿಮಿನಲ್ ದಾಖಲೆಯ ವಿವರಗಳನ್ನು ನೀಡುತ್ತಾ, 2004 ರಲ್ಲಿ ಅವರನ್ನು ಮೊದಲು ಬಂಧಿಸಲಾಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಾಗಿ ಅವರು 16 ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. 2020 ರ ಜನವರಿಯಲ್ಲಿ ಉತ್ತಮ ನಡವಳಿಕೆಗಾಗಿ ಅವರು 20 ದಿನಗಳ ಪೆರೋಲ್ ಪಡೆದಿದ್ದರು. ಆದರೆ ಪೆರೋಲ್‌ ಸಮಯದಲ್ಲಿ ಅವರು ನಾಪತ್ತೆಯಾಗಿದ್ದರು. ಜುಲೈ 28 ರಂದು ದೆಹಲಿ ಪೊಲೀಸ್ ಅಪರಾಧ ಶಾಖೆಯು ಅವರನ್ನು ಮತ್ತೆ ಬಂಧಿಸಲಾಯಿತು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಎನ್‌ಡಿಟಿವಿ ವರದಿಗಳು ಕೂಡಾ ಇದೇ ರೀತಿಯ ವಿವರಗಳನ್ನು ನೀಡಿವೆ. “ಅವರು ಮೊಸಳೆಗಳನ್ನು ಹೊಂದಿದ್ದ ಕಾಸ್‌ಗಂಜ್‌ನ ಹಜಾರಾ ಕಾಲುವೆಯಲ್ಲಿರುವ ಅಲಿಗಡ್‌ಗೆ ಹೋಗುವ ದಾರಿಯಲ್ಲಿ ಶವಗಳನ್ನು ಎಸೆಯುತ್ತಿದ್ದರು, ಆದ್ದರಿಂದ ಶವಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಪರಾಧ ಶಾಖೆಯ ಡಿಸಿಪಿ ರಾಕೇಶ್ ಪವೇರಿಯಾ ಅವರು, ‘ಕೊರೊನಾ ವೈರಸ್‌ಗೂ ಈ ಘಟನೆಗೂ ಯಾವುದೆ ಸಂಬಂಧವಿಲ್ಲವೆಂದಿದ್ದಾರೆಂದು’ ದಿ ಕ್ವಿಂಟ್ ವರದಿ ಮಾಡಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮೂತ್ರಪಿಂಡದ ದಂಧೆ ನಡೆಸಿದ್ದಕ್ಕಾಗಿ ಶಿಕ್ಷೆಗೊಳಗಾದ ಸರಣಿ ಅಪರಾಧಗಳ ಅಪರಾಧಿಯ ಬಂಧನವನ್ನು ಕೊರೊನಾ ವೈರಸ್ ಹೆಸರಲ್ಲಿ ಸುಳ್ಳು  ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...