Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

- Advertisement -
- Advertisement -

ಹಳೆಯ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿರುವ ವೈದ್ಯರ ಬಂಧನದ ದಶಕದಷ್ಟು ಹಳೆಯ ಸುದ್ದಿಯನ್ನು ಕೊರೊನಾ ವೈರಸ್ ಹೆಸರಲ್ಲಿ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ವೈರಲ್ ಚಿತ್ರವೊಂದನ್ನು “ಮೂತ್ರಪಿಂಡ ವ್ಯಾಪಾರಕ್ಕಾಗಿ ಕೊರೊನಾ ನೆಪದಲ್ಲಿ 125 ರೋಗಿಗಳನ್ನು ಕೊಂದ ವೈದ್ಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವೈರಲ್ ಮಾಡಲಾಗುತ್ತಿದೆ.

ಆದರೆ ಈ ಚಿತ್ರದಲ್ಲಿ ಇರುವ ವೈದ್ಯ 2004 ರಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದರು. ಇದರ ನಂತರ ಅವರಿಗೆ 2020 ರ ಜನವರಿಯಲ್ಲಿ 20 ದಿನಗಳ ಪೆರೋಲ್ ದೊರೆತಿದ್ದು, ಆಗ ನಾಪತ್ತೆಯಾಗಿದ್ದ ಅವರನ್ನು ಜುಲೈ 28 ರಂದು ಮತ್ತೆ ಬಂಧಿಸಲಾಯಿತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಮೇಲೆ ತಿಳಿಸಿದಂತೆ ಹಲವಾರು ಜನರು ಇದನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ವೈರಲ್ ಮಾಡಿದ್ದಾರೆ. ಈ ಸಂದೇಶಗಳು ದೆಹಲಿ ಪೊಲೀಸರು ಬಂಧಿಸಿರುವ ಡಾ.ದೇವೇಂದ್ರ ಶರ್ಮಾ ಕರೋನಾ ವೈರಸ್ ರೋಗನಿರ್ಣಯದ ಹೆಸರಿನಲ್ಲಿ ರೋಗಿಗಳ ಮೂತ್ರಪಿಂಡಗಳನ್ನು ಮಾರಾಟ ಮಾಡಿದ್ದಾರೆ.  ತನ್ನ ವಿರುದ್ಧದ ಸಾಕ್ಷ್ಯಗಳನ್ನು ತೊಡೆದುಹಾಕಲು ಈ ವೈದ್ಯ ರೋಗಿಗಳ ಮೃತ ದೇಹಗಳನ್ನು ಮೊಸಳೆಗಳಿಗೆ ಆಹಾರವಾಗಿ ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟ್‌ಚೆಕ್

ಈ ಸಂದೇಶವು ಟೈಮ್ಸ್ ಆಫ್ ಇಂಡಿಯಾ ವರದಿಯ ಚಿತ್ರದೊಂದಿಗೆ ಇದು ಪ್ರಸಾರವಾಗುತ್ತಿದೆ. ಆದರೆ ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವರದಿಯ ಪ್ರಕಾರ, ಆಯುರ್ವೇದ ವೈದ್ಯ ಡಾ.ದೇವೇಂದ್ರ ಶರ್ಮಾ ಅವರು ಸರಣಿ ಅಪರಾಧಗಳ ಅಪರಾಧಿಯಾಗಿದ್ದು, ಅವರು ಕಿಡ್ನಿ ದಂಧೆ ನಡೆಸುವುದು, ನಕಲಿ ಅನಿಲ ಏಜೆನ್ಸಿ ನಡೆಸುವುದು ಮತ್ತು ಕದ್ದ ವಾಹನಗಳ ಮಾರಾಟ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.

ದೇವೇಂದ್ರ ಅವರ ಕ್ರಿಮಿನಲ್ ದಾಖಲೆಯ ವಿವರಗಳನ್ನು ನೀಡುತ್ತಾ, 2004 ರಲ್ಲಿ ಅವರನ್ನು ಮೊದಲು ಬಂಧಿಸಲಾಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಾಗಿ ಅವರು 16 ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. 2020 ರ ಜನವರಿಯಲ್ಲಿ ಉತ್ತಮ ನಡವಳಿಕೆಗಾಗಿ ಅವರು 20 ದಿನಗಳ ಪೆರೋಲ್ ಪಡೆದಿದ್ದರು. ಆದರೆ ಪೆರೋಲ್‌ ಸಮಯದಲ್ಲಿ ಅವರು ನಾಪತ್ತೆಯಾಗಿದ್ದರು. ಜುಲೈ 28 ರಂದು ದೆಹಲಿ ಪೊಲೀಸ್ ಅಪರಾಧ ಶಾಖೆಯು ಅವರನ್ನು ಮತ್ತೆ ಬಂಧಿಸಲಾಯಿತು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಎನ್‌ಡಿಟಿವಿ ವರದಿಗಳು ಕೂಡಾ ಇದೇ ರೀತಿಯ ವಿವರಗಳನ್ನು ನೀಡಿವೆ. “ಅವರು ಮೊಸಳೆಗಳನ್ನು ಹೊಂದಿದ್ದ ಕಾಸ್‌ಗಂಜ್‌ನ ಹಜಾರಾ ಕಾಲುವೆಯಲ್ಲಿರುವ ಅಲಿಗಡ್‌ಗೆ ಹೋಗುವ ದಾರಿಯಲ್ಲಿ ಶವಗಳನ್ನು ಎಸೆಯುತ್ತಿದ್ದರು, ಆದ್ದರಿಂದ ಶವಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಪರಾಧ ಶಾಖೆಯ ಡಿಸಿಪಿ ರಾಕೇಶ್ ಪವೇರಿಯಾ ಅವರು, ‘ಕೊರೊನಾ ವೈರಸ್‌ಗೂ ಈ ಘಟನೆಗೂ ಯಾವುದೆ ಸಂಬಂಧವಿಲ್ಲವೆಂದಿದ್ದಾರೆಂದು’ ದಿ ಕ್ವಿಂಟ್ ವರದಿ ಮಾಡಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮೂತ್ರಪಿಂಡದ ದಂಧೆ ನಡೆಸಿದ್ದಕ್ಕಾಗಿ ಶಿಕ್ಷೆಗೊಳಗಾದ ಸರಣಿ ಅಪರಾಧಗಳ ಅಪರಾಧಿಯ ಬಂಧನವನ್ನು ಕೊರೊನಾ ವೈರಸ್ ಹೆಸರಲ್ಲಿ ಸುಳ್ಳು  ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...