Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

- Advertisement -
- Advertisement -

ಹಳೆಯ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿರುವ ವೈದ್ಯರ ಬಂಧನದ ದಶಕದಷ್ಟು ಹಳೆಯ ಸುದ್ದಿಯನ್ನು ಕೊರೊನಾ ವೈರಸ್ ಹೆಸರಲ್ಲಿ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ವೈರಲ್ ಚಿತ್ರವೊಂದನ್ನು “ಮೂತ್ರಪಿಂಡ ವ್ಯಾಪಾರಕ್ಕಾಗಿ ಕೊರೊನಾ ನೆಪದಲ್ಲಿ 125 ರೋಗಿಗಳನ್ನು ಕೊಂದ ವೈದ್ಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವೈರಲ್ ಮಾಡಲಾಗುತ್ತಿದೆ.

ಆದರೆ ಈ ಚಿತ್ರದಲ್ಲಿ ಇರುವ ವೈದ್ಯ 2004 ರಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದರು. ಇದರ ನಂತರ ಅವರಿಗೆ 2020 ರ ಜನವರಿಯಲ್ಲಿ 20 ದಿನಗಳ ಪೆರೋಲ್ ದೊರೆತಿದ್ದು, ಆಗ ನಾಪತ್ತೆಯಾಗಿದ್ದ ಅವರನ್ನು ಜುಲೈ 28 ರಂದು ಮತ್ತೆ ಬಂಧಿಸಲಾಯಿತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಮೇಲೆ ತಿಳಿಸಿದಂತೆ ಹಲವಾರು ಜನರು ಇದನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ವೈರಲ್ ಮಾಡಿದ್ದಾರೆ. ಈ ಸಂದೇಶಗಳು ದೆಹಲಿ ಪೊಲೀಸರು ಬಂಧಿಸಿರುವ ಡಾ.ದೇವೇಂದ್ರ ಶರ್ಮಾ ಕರೋನಾ ವೈರಸ್ ರೋಗನಿರ್ಣಯದ ಹೆಸರಿನಲ್ಲಿ ರೋಗಿಗಳ ಮೂತ್ರಪಿಂಡಗಳನ್ನು ಮಾರಾಟ ಮಾಡಿದ್ದಾರೆ.  ತನ್ನ ವಿರುದ್ಧದ ಸಾಕ್ಷ್ಯಗಳನ್ನು ತೊಡೆದುಹಾಕಲು ಈ ವೈದ್ಯ ರೋಗಿಗಳ ಮೃತ ದೇಹಗಳನ್ನು ಮೊಸಳೆಗಳಿಗೆ ಆಹಾರವಾಗಿ ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟ್‌ಚೆಕ್

ಈ ಸಂದೇಶವು ಟೈಮ್ಸ್ ಆಫ್ ಇಂಡಿಯಾ ವರದಿಯ ಚಿತ್ರದೊಂದಿಗೆ ಇದು ಪ್ರಸಾರವಾಗುತ್ತಿದೆ. ಆದರೆ ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವರದಿಯ ಪ್ರಕಾರ, ಆಯುರ್ವೇದ ವೈದ್ಯ ಡಾ.ದೇವೇಂದ್ರ ಶರ್ಮಾ ಅವರು ಸರಣಿ ಅಪರಾಧಗಳ ಅಪರಾಧಿಯಾಗಿದ್ದು, ಅವರು ಕಿಡ್ನಿ ದಂಧೆ ನಡೆಸುವುದು, ನಕಲಿ ಅನಿಲ ಏಜೆನ್ಸಿ ನಡೆಸುವುದು ಮತ್ತು ಕದ್ದ ವಾಹನಗಳ ಮಾರಾಟ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.

ದೇವೇಂದ್ರ ಅವರ ಕ್ರಿಮಿನಲ್ ದಾಖಲೆಯ ವಿವರಗಳನ್ನು ನೀಡುತ್ತಾ, 2004 ರಲ್ಲಿ ಅವರನ್ನು ಮೊದಲು ಬಂಧಿಸಲಾಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಾಗಿ ಅವರು 16 ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. 2020 ರ ಜನವರಿಯಲ್ಲಿ ಉತ್ತಮ ನಡವಳಿಕೆಗಾಗಿ ಅವರು 20 ದಿನಗಳ ಪೆರೋಲ್ ಪಡೆದಿದ್ದರು. ಆದರೆ ಪೆರೋಲ್‌ ಸಮಯದಲ್ಲಿ ಅವರು ನಾಪತ್ತೆಯಾಗಿದ್ದರು. ಜುಲೈ 28 ರಂದು ದೆಹಲಿ ಪೊಲೀಸ್ ಅಪರಾಧ ಶಾಖೆಯು ಅವರನ್ನು ಮತ್ತೆ ಬಂಧಿಸಲಾಯಿತು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಎನ್‌ಡಿಟಿವಿ ವರದಿಗಳು ಕೂಡಾ ಇದೇ ರೀತಿಯ ವಿವರಗಳನ್ನು ನೀಡಿವೆ. “ಅವರು ಮೊಸಳೆಗಳನ್ನು ಹೊಂದಿದ್ದ ಕಾಸ್‌ಗಂಜ್‌ನ ಹಜಾರಾ ಕಾಲುವೆಯಲ್ಲಿರುವ ಅಲಿಗಡ್‌ಗೆ ಹೋಗುವ ದಾರಿಯಲ್ಲಿ ಶವಗಳನ್ನು ಎಸೆಯುತ್ತಿದ್ದರು, ಆದ್ದರಿಂದ ಶವಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಪರಾಧ ಶಾಖೆಯ ಡಿಸಿಪಿ ರಾಕೇಶ್ ಪವೇರಿಯಾ ಅವರು, ‘ಕೊರೊನಾ ವೈರಸ್‌ಗೂ ಈ ಘಟನೆಗೂ ಯಾವುದೆ ಸಂಬಂಧವಿಲ್ಲವೆಂದಿದ್ದಾರೆಂದು’ ದಿ ಕ್ವಿಂಟ್ ವರದಿ ಮಾಡಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮೂತ್ರಪಿಂಡದ ದಂಧೆ ನಡೆಸಿದ್ದಕ್ಕಾಗಿ ಶಿಕ್ಷೆಗೊಳಗಾದ ಸರಣಿ ಅಪರಾಧಗಳ ಅಪರಾಧಿಯ ಬಂಧನವನ್ನು ಕೊರೊನಾ ವೈರಸ್ ಹೆಸರಲ್ಲಿ ಸುಳ್ಳು  ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....