Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...