Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...