Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...