Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...