Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...