Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...