Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...