Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...