Homeಫ್ಯಾಕ್ಟ್‌ಚೆಕ್ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಫ್ಯಾಕ್ ಚೆಕ್: ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಜುಲೈ 1 ರಂದು ಕಾಶ್ಮೀರದಲ್ಲಿ ಉಗ್ರರು ಮತ್ತು CRPF (ಭಾರತೀಯ ಭದ್ರತಾ ಸಿಬ್ಬಂದಿಗಳ) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಅಜ್ಜನ ಸಾವನ್ನು ಕಣ್ಣಾರೆ ಕಂಡ ಮೂರು ವರ್ಷದ ಮಗುವಿನ ಮನಕಲಕುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಚಿತ್ರದ ಹಿನ್ನೆಲೆಯಲ್ಲಿ ಕಂಡುಬರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲು ಹುಡುಗ ಕಲ್ಲು ಎತ್ತಿಕೊಂಡಿದ್ದಾನೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ಈ ವೈರಲ್ ಚಿತ್ರದಲ್ಲಿ ಮಗುವಿನ ಅಜ್ಜನ ಮೃತದೇಹ ಬೀದಿಯಲ್ಲಿ ಬಿದ್ದಿರುವುದು ತೋರಿಸುತ್ತದೆ. ಈ ಹಿನ್ನೆಲೆಯಲ್ಲಿ, ಸಿಆರ್‌ಪಿಎಫ್ ಸಿಬ್ಬಂದಿ ಅವನನ್ನು ದೂರ ಹೋಗುವಂತೆ ಸಂಕೇತಿಸುತ್ತಿರುವುದನ್ನು ಕಾಣಬಹುದು. ಚಿತ್ರದಲ್ಲಿರುವ ಮಗುವಿನ ಬಲಗೈಯನ್ನು ವೃತ್ತ ಹಾಕಿ ವಿಷೇಶವಾಗಿ ಗುರುತಿಸಲಾಗಿದೆ.

ಈ ವೈರಲ್ ಚಿತ್ರದ ಶೀರ್ಷಿಕೆ ಹೀಗಿದೆ ‘ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ತನ್ನ ಅಜ್ಜ ಕೊಲ್ಲಲ್ಪಟ್ಟ ನಂತರ ಈ ಪುಟ್ಟ ಹುಡುಗ ತನ್ನ ಕೈಯ್ಯಲ್ಲಿ ಕಲ್ಲು ಹಿಡಿದಿದ್ದಾನೆ…. ಯಾರು ಮತ್ತು ಯಾಕೆ ಕಲ್ಲು ಎತ್ತಿಕೊಂಡಿದ್ದಾನೆ, ಯಾರು ಅವನ ಟಾರ್ಗೆಟ್ ಆಗಲಿದ್ದಾರೆ ಎಂದು ಯಾರಾದರೂ ಊಹಿಸಬಹುದೇ? ಅನಿವಾರ್ಯ ಪ್ರಶ್ನೆಯೇ? ಅದಕ್ಕೆ ಉತ್ತರಿಸಲು ಅಗತ್ಯವಿದೆ’..

ಅಲ್ಲಿಗೆ ಆ ಮಗು ಸೈನಿಕನಿಗೆ ಕಲ್ಲು ಹೊಡೆಯಲು ಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನೀವು ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಬಹುದು.

ಅಷ್ಟೇ ಅಲ್ಲದೆ ಹಲವಾರು ಟ್ವಿಟರ್ ಹ್ಯಾಂಡಲ್‌ಗಳಿಂದ ಕೂಡಾ ಈ ಚಿತ್ರ ವೈರಲ್ ಆಗಿದೆ.

ಫ್ಯಾಕ್ಟ್ ಚೆಕ್:

ಎಲ್ಲಾ ಕಡೆ ಹರಿದಾಡುತ್ತಿರುವ ಈ ಚಿತ್ರವನ್ನು ಬೇರೆ ಬೇರೆ ಕೋನದಿಂದ ಸರಿಯಾಗಿ ಗಮನಿಸಿದರೆ ಅದು ಮಗುವಿನ ಕೈಯಲ್ಲಿರುವುದು ಕಲ್ಲಲ್ಲ ಎಂದು ಸ್ಪಷ್ಟವಾಗಿದೆ. ಆತನ ಕೈಯಲ್ಲಿ ಏನು ಇಲ್ಲ, ಬದಲಿಗೆ  ಮುಂದೆ ಇರುವ ಬಂಡೆಯಿಂದಾಗಿ ಕೈಯಲ್ಲಿ ಕಲ್ಲು ಹಿಡಿದಿರುವುಂತೆ ಭಾಸವಾಗುತ್ತದೆ ಅಷ್ಟೇ.

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚಿತ್ರ ಕೂಡಾ ಹರಿದಾಡುತ್ತಿದ್ದು, ಅದರಲ್ಲಿ ಹುಡುಗ ತನ್ನ ಅಜ್ಜನ ಮೃತದೇಹದ ಮೇಲೆ ಕುಳಿತು ಅವನನ್ನು ಎಚ್ಚರಗೊಳಿಸಲು ಪ್ರಯತ್ನಿಸುತ್ತಿರುವುದು ಕಾಣಬಹುದಾಗಿದೆ. ಅದೇ ಚಿತ್ರದ ಹಿನ್ನಲೆಯಲ್ಲಿಯೂ ಮೂರು ಬಂಡೆಗಳನ್ನು ಕಾಣಬಹುದಾಗಿದೆ.

CRPF ಸಿಬ್ಬಂದಿಯ ಕಡೆಗೆ ಹುಡುಗ ನಡೆದುಕೊಂಡು ಹೋಗುತ್ತಿರುವ ವೈರಲ್ ವಿಡಿಯೋ ಪರಿಶೀಲಿಸಿದರೆ, ಬಾಲಕನ ಕೈಗಳು ತೂಗಾಡುತ್ತಿವೆ. ಎಡಗೈ ಮುಂದಿದ್ದರೆ ಬಲಗೈ ಅವನ ದೇಹಕ್ಕೆ ಸಮಾನಾಂತರವಾಗಿದೆ.

ಹುಡುಗನ ಮುಷ್ಟಿಯು ಅವನ ಮುಂದೆ ಇರುವ ಬಂಡೆಗಳ ಅಂಚುಗಳೊಂದಿಗೆ ಬೆರೆತು ಚಿತ್ರವೂ ಕಲ್ಲಿನ ಭ್ರಮೆಯನ್ನು ಸೃಷ್ಟಿಸುತ್ತದೆ. ಇದನ್ನು ಸರಿಯಾಗಿ ಗಮನಿಸಿದರೆ ಅದನ್ನು ಗುರುತಿಸಬಹುದಾಗಿದೆ.

ಇಂಡಿಯಾ ಟುಡೇ ಪತ್ರಿಕೆಯಲ್ಲಿ ಕೂಡಾ ಅದೇ ಚಿತ್ರವಿದೆ ಆದರೆ ವರದಿಯಲ್ಲಿ ಬಾಲಕನ ಕೈಯ್ಯಲ್ಲಿ ಕಲ್ಲುಗಳು ಇದೆ ಎಂದು ವರದಿ ಮಾಡಿಲ್ಲ. ಹಾಗಾಗಿ ಬಾಲಕ CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿದ ಎಂಬುದು ಸುಳ್ಳು ಸುದ್ದಿಯಾಗಿದೆ.

ಸುದ್ದಿ ವರದಿಗಳ ಪ್ರಕಾರ, 60 ವರ್ಷದ ನಾಗರಿಕ ತನ್ನ ಮೊಮ್ಮಗನೊಂದಿಗೆ ಕಾರಿನಲ್ಲಿ ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ, ಗುಂಡಿನ ಚಕಮಕಿಯ ನಡುವೆ ಸಿಲುಕಿಕೊಂಡರು. ಈ ಸಂಧರ್ಭದಲ್ಲಿ ಎರಡು ಗುಂಡುಗಳು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಗುಂಡು ಪೊಲೀಸರಿಂದ ಬಂದ ಗುಂಡುಗಳಾಗಿದ್ದು, ಉಗ್ರಗಾಮಿಗಳದ್ದು ಅಲ್ಲ ಎಂದು ಹೇಳುತ್ತಿದ್ದಾರೆ.

ಪಾಯಿಂಟ್-ಬ್ಲಾಂಕ್ ವ್ಯಾಪ್ತಿಯಲ್ಲಿ ಗುಂಡು ಹಾರಿಸಿರುವ ಪೊಲೀಸರು ಅದಕ್ಕೂ ಮುದಲು ವೃದ್ದನನ್ನು ಅವರ ಕಾರಿನಿಂದ ಹೊರಗೆ ಎಳೆದೊಯ್ಯಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಈಗ ವೀಡಿಯೊಗಳನ್ನು ಬಿಡುಗಡೆ ಮಾಡಿದೆ. ಆದರೆ ಅದನ್ನು ಪರಿಶೀಲಿಸಲಾಗಿಲ್ಲ.


ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....